ತಮಿಳಿನಿಂದ ಕನ್ನಡಕ್ಕೆ ಮರಳಿದ ಜಿಂಕೆ ಮರಿ ನಂದಿತಾ ಶ್ವೇತಾ: ಕಿಚ್ಚ ಸುದೀಪ್ ಸಪೋರ್ಟ್

ತಮಿಳಿನಿಂದ ಕನ್ನಡಕ್ಕೆ ಮರಳಿದ ಜಿಂಕೆ ಮರಿ ನಂದಿತಾ ಶ್ವೇತಾ: ಕಿಚ್ಚ ಸುದೀಪ್ ಸಪೋರ್ಟ್




<p>ಆ್ಯಕ್ಷನ್‌ ಥ್ರಿಲ್ಲರ್ ‘ಬೆನ್ನಿ’ ಸಿನಿಮಾ ಮೂಲಕ ತುಂಬಾ ವರ್ಷಗಳ‍ ಬಳಿಕ ಕನ್ನಡ ಸಿನಿಮಾದಲ್ಲಿ ನಟಿ ನಂದಿತಾ ಶ್ವೇತಾ ನಟಿಸಿದ್ದಾರೆ.</p><img><p>ನಂದಿತಾ ಶ್ವೇತಾ ಮರಳಿ ಕನ್ನಡಕ್ಕೆ ಬಂದಿದ್ದಾರೆ. ಆ್ಯಕ್ಷನ್‌ ಥ್ರಿಲ್ಲರ್ ‘ಬೆನ್ನಿ’ ಸಿನಿಮಾ ಮೂಲಕ ತುಂಬಾ ವರ್ಷಗಳ‍ ಬಳಿಕ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ‘ಪೆಪೆ’ ಚಿತ್ರ ನಿರ್ದೇಶಿಸಿದ್ದ ಶ್ರೀಲೇಶ್‌ ಎಸ್‌ ನಾಯರ್‌ ನಿರ್ದೇಶನ ಮಾಡಿರುವ ಈ ಚಿತ್ರದ ಫಸ್ಟ್‌ ಲುಕ್‌ ಟೀಸರ್‌ಗೆ ಕಿಚ್ಚ ಸುದೀಪ್‌ ಧ್ವನಿ ನೀಡಿದ್ದಾರೆ.</p><img><p>‘ಹೊಂದಿಸಿ ಬರೆಯಿರಿ’ ಚಿತ್ರದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್‌ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ತಂದೆ ಮತ್ತು ಮಗಳ ಬದುಕಿನ ಘಟನೆಗಳ ಸುತ್ತಾ ಈ ಸಿನಿಮಾ ಸಾಗುತ್ತದೆ.</p><img><p>ನಟಿ ಶ್ವೇತಾ ಇಲ್ಲಿ ಬೆನ್ನಿಯಾಗಿ ಟೈಲಟ್ ರೋಲ್ ಪ್ಲೇ ಮಾಡುತ್ತಿದ್ದಾರೆ. ತಂದೆ ಮತ್ತು ಮಗಳ ಬದುಕಿನಲ್ಲಿ ಎದುರಾಗುವ ಘಟನೆಗಳ ವಿರುದ್ಧ ನಡೆಯುವ ಪ್ರಸ್ತುತ ಕಾಲಘಟ್ಟ ಕಥಾಹಂದರವನ್ನು ಬೆನ್ನಿ ಹೊಂದಿದೆ.</p><img><p>ದಕ್ಷಿಣದ ಭಾರತದ ಪ್ರಮುಖ ನಟರು ‘ಬೆನ್ನಿ’ಗೆ ಜೊತೆಯಾಗಲಿದ್ದಾರೆ. ಕನ್ನಡ ಮಾತ್ರವಲ್ಲ ತೆಲುಗು, ತಮಿಳು ಹಾಗೂ ಮಲಯಾಳಂ ಈ ಚಿತ್ರ ಮೂಡಿ ಬರುತ್ತಿದೆ. ಸಂಡೇ ಸಿನಿಮಾಸ್ ಬ್ಯಾನರ್ನಡಿ ರಾಮೇನಹಳ್ಳಿ ಜಗನ್ನಾಥ್ ಚಿತ್ರವನ್ನು ನಿರ್ಮಿಸಿ ಪ್ರೆಸೆಂಟ್ ಮಾಡುತ್ತಿದ್ದಾರೆ.</p><img><p>ಸಚಿನ್ ಬಸ್ರೂರ್ ಸಂಗೀತ, ಗುರುಪ್ರಸಾದ್ ನಾರ್ನಾದ್ ಛಾಯಾಗ್ರಹಣ, ಮನು ಶೇಡ್ಗಾರ್ ಹಾಗೂ ರಂಜನ್ ನರಸಿಂಹಮೂರ್ತಿ ಸಂಕಲನ ಸಿನಿಮಾಕ್ಕಿದೆ. ವಿಶೇಷವಾಗಿ ಇದು ಮಹಿಳಾ ಪ್ರಧಾನ ಸಿನಿಮಾ.</p><img><p>ನಂದಿತಾ ಶ್ವೇತಾ ಈ ಹಿಂದೆ ಲೂಸ್‌ಮಾದ ನಾಯಕನಾಗಿ ನಟಿಸಿದ್ದ ‘ನಂದಾ ಲವ್ಸ್‌ ನಂದಿತಾ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ‘ಜಿಂಕೆ ಮರಿನಾ’ ಹಾಡಿನ ಮೂಲಕ ಖ್ಯಾತಿ ಗಳಿಸಿದ್ದ ಈ ನಟಿ ಆ ನಂತರ ತಮಿಳು ಚಿತ್ರರಂಗಕ್ಕೆ ಹೋಗಿ ಅಲ್ಲಿ 26ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.</p>



Source link

Leave a Reply

Your email address will not be published. Required fields are marked *