
ಕಳೆದ 2025ರ ಸೆಪ್ಟೆಂಬರ್ 27ರಂದು, ಕರೂರಿನ ವೇಲುಸ್ವಾಮಿಪುರಂನಲ್ಲಿ ನಟ ವಿಜಯ್ ಭಾಗವಹಿಸಿದ್ದ ಪಕ್ಷದ ಪ್ರಚಾರ ಸಭೆ ನಡೆದಿತ್ತು. ಸುಮಾರು 10,000 ಮಂದಿ ಮಾತ್ರ ಕೂರಬಹುದಾದ ಸ್ಥಳದಲ್ಲಿ 30,000ಕ್ಕೂ ಹೆಚ್ಚು ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿದ್ದರು. ಈ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 10 ಮಕ್ಕಳು, 18 ಮಹಿಳೆಯರು ಸೇರಿದಂತೆ ಒಟ್ಟು 41 ಮಂದಿ ಮೃತಪಟ್ಟಿದ್ದರು. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಈ ಪ್ರಕರಣದಲ್ಲಿ ಸರಿಯಾದ ಭದ್ರತಾ ವ್ಯವಸ್ಥೆ ಮಾಡಿರಲಿಲ್ಲ ಮತ್ತು ವಿಜಯ್ ತಡವಾಗಿ ಬಂದಿದ್ದೇ ಕಾಲ್ತುಳಿತಕ್ಕೆ ಮುಖ್ಯ ಕಾರಣ ಎಂದು ಆರೋಪಗಳು ಕೇಳಿಬಂದವು. ತಮಿಳುನಾಡು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದ ತನಿಖೆ ತೃಪ್ತಿಕರವಾಗಿಲ್ಲ ಎಂದು ಹೇಳಿ, ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.