ಮತ್ತೆ ಕಾವೇರಿದ ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ 19 ವಿಮಾನಗಳ ಹಾರಾಟ ರದ್ದು! | Bengaluru Kempegowda Airport 19 Flights Cancelled Due To Iran Israel War Sat

ಮತ್ತೆ ಕಾವೇರಿದ ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ 19 ವಿಮಾನಗಳ ಹಾರಾಟ ರದ್ದು! | Bengaluru Kempegowda Airport 19 Flights Cancelled Due To Iran Israel War Sat



ಮತ್ತೆ ಕಾವೇರಿದ ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ 19 ವಿಮಾನಗಳ ಹಾರಾಟ ರದ್ದು! | Bengaluru Kempegowda Airport 19 Flights Cancelled Due To Iran Israel War Sat

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿಯಿಂದಾಗಿ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಪ್ರಾಚ್ಯಕ್ಕೆ ತೆರಳಬೇಕಿದ್ದ ಒಟ್ಟು 19 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ.

ಬೆಂಗಳೂರು (ಮಾ.09): ಮಧ್ಯ ಪ್ರಾಚ್ಯದ ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧದ ಭೀತಿ ಎದುರಾಗಿದ್ದು, ಜಾಗತಿಕ ವಿಮಾನಯಾನ ಕ್ಷೇತ್ರದ ಮೇಲೆ ಇದು ಭಾರಿ ಪರಿಣಾಮ ಬೀರಿದೆ. ಈ ಯುದ್ಧದ ಬಿಸಿ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ತಟ್ಟಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ಮಧ್ಯಪ್ರಾಚ್ಯ ದೇಶಗಳಿಗೆ ತೆರಳಬೇಕಿದ್ದ ಹಾಗೂ ಅಲ್ಲಿಂದ ಬರಬೇಕಿದ್ದ ಒಟ್ಟು 19 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಒಟ್ಟು 19 ವಿಮಾನಗಳು ರದ್ದು:

ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ವೈಮಾನಿಕ ಮಾರ್ಗಗಳು ಅಸುರಕ್ಷಿತವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಏರ್‌ಲೈನ್ಸ್‌ಗಳು ಈ ನಿರ್ಧಾರ ಕೈಗೊಂಡಿವೆ. ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್‌ಗೆ ವಿವಿಧ ದೇಶಗಳಿಂದ ಆಗಮಿಸಬೇಕಿದ್ದ 9 ವಿಮಾನಗಳನ್ನು ರದ್ದುಗೊಳಿಸಲಾಗಿದ್ದರೆ, ಬೆಂಗಳೂರಿನಿಂದ ಹೊರದೇಶಗಳಿಗೆ ತೆರಳಬೇಕಿದ್ದ 10 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುವಂತಾಗಿದೆ.

ಯಾವೆಲ್ಲಾ ದೇಶಗಳ ವಿಮಾನಗಳು ರದ್ದು?

ಬೆಂಗಳೂರಿನಿಂದ ಮುಖ್ಯವಾಗಿ ಮಧ್ಯಪ್ರಾಚ್ಯ (Middle East) ದೇಶಗಳಿಗೆ ಸಂಪರ್ಕ ಕಲ್ಪಿಸುವ ವಿಮಾನಗಳು ಈ ಸಮಸ್ಯೆಗೆ ಸಿಲುಕಿವೆ. ಅಬುದಾಬಿ, ರಿಯಾದ್, ಜಡ್ಡ, ದಮನ್, ದುಬೈ ಹಾಗೂ ದೋಹ ದೇಶಗಳಿಗೆ ತೆರಳಬೇಕಿದ್ದ ವಿಮಾನಗಳು ರದ್ದಾಗಿವೆ. ಯುದ್ಧ ಪೀಡಿತ ಪ್ರದೇಶಗಳ ಮೇಲೆ ವಿಮಾನ ಹಾರಾಟ ನಡೆಸುವುದು ಅಪಾಯಕಾರಿ ಎಂಬ ಕಾರಣಕ್ಕೆ ಅಂತರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಈ ಮಾರ್ಗಗಳಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ ಅಥವಾ ಮಾರ್ಗ ಬದಲಾವಣೆ ಮಾಡಿವೆ.

ಪ್ರಯಾಣಿಕರ ಪರದಾಟ:

ವಿಮಾನಗಳು ದಿಢೀರ್ ರದ್ದಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಕೆಲಸದ ನಿಮಿತ್ತ ಹಾಗೂ ತುರ್ತು ಕಾರ್ಯಗಳಿಗಾಗಿ ವಿದೇಶಗಳಿಗೆ ತೆರಳಬೇಕಿದ್ದವರು ಏರ್ಪೋರ್ಟ್‌ನಲ್ಲಿ ಕಾಯುವಂತಾಗಿದೆ. ಕೆಲವು ಏರ್‌ಲೈನ್ಸ್‌ಗಳು ಟಿಕೆಟ್ ಹಣವನ್ನು ಮರುಪಾವತಿ ಮಾಡುವ ಭರವಸೆ ನೀಡಿದ್ದರೆ, ಇನ್ನು ಕೆಲವು ಸಂಸ್ಥೆಗಳು ಪರಿಸ್ಥಿತಿ ತಿಳಿಯಾದ ನಂತರ ಮುಂದಿನ ದಿನಾಂಕದ ಟಿಕೆಟ್ ನೀಡುವುದಾಗಿ ತಿಳಿಸಿವೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಕೂಡ ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ನೆರವಾಗಲು ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿದೆ.

ಜಾಗತಿಕ ತೈಲ ಬೆಲೆಯ ಮೇಲೂ ಪರಿಣಾಮ:

ಇರಾನ್-ಇಸ್ರೇಲ್ ಸಂಘರ್ಷ ಕೇವಲ ವಿಮಾನಯಾನಕ್ಕೆ ಮಾತ್ರವಲ್ಲದೆ, ಜಾಗತಿಕ ಮಾರುಕಟ್ಟೆಗೂ ಹೊಡೆತ ನೀಡುವ ಸಾಧ್ಯತೆಯಿದೆ. ತೈಲ ಉತ್ಪಾದನಾ ದೇಶಗಳಿರುವ ಈ ಭಾಗದಲ್ಲಿ ಅಶಾಂತಿ ಮುಂದುವರಿದರೆ ಭಾರತದಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ. ಸದ್ಯಕ್ಕೆ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತ ಸರ್ಕಾರ, ಭಾರತೀಯ ನಾಗರಿಕರಿಗೆ ಸಂಘರ್ಷ ಪೀಡಿತ ಪ್ರದೇಶಗಳಿಗೆ ಪ್ರಯಾಣಿಸದಂತೆ ಸೂಚನೆ ನೀಡಿದೆ.



Source link

Leave a Reply

Your email address will not be published. Required fields are marked *