Headlines

ಅಮೇರಿಕ ತೆರಳಲು ಕೇಂದ್ರ ನಿರ್ಬಂಧ ವಿಧಿಸಿದ್ದರಿಂದ ರಾಜ್ಯಕ್ಕೆ ಕನಿಷ್ಠ ₹ 15,000 ಕೋಟಿ ನಷ್ಟವಾಗಿದೆ: ಪ್ರಿಯಾಂಕ್ ಖರ್ಗೆ

ಅಮೇರಿಕ ತೆರಳಲು ಕೇಂದ್ರ ನಿರ್ಬಂಧ ವಿಧಿಸಿದ್ದರಿಂದ ರಾಜ್ಯಕ್ಕೆ ಕನಿಷ್ಠ ₹ 15,000 ಕೋಟಿ ನಷ್ಟವಾಗಿದೆ: ಪ್ರಿಯಾಂಕ್ ಖರ್ಗೆ


ಕಲಬುರಗಿ, ಜೂನ್ 24: ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ತೆರಳಲು ಕೇಂದ್ರ ಸರ್ಕಾರ ತನಗೆ ಅನುಮತಿ ನಿರಾಕರಿಸಿದ ಕಾರಣ ಕರ್ನಾಟಕಕ್ಕೆ ಏನಿಲ್ಲವೆಂದರೂ ₹15 ಸಾವಿರ ಕೋಟಿ ನಷ್ಟವಾಗಿರಬಹುದು ಎಂದು ಹೇಳಿದರು. ಹಿಂದೆ ರಾಜ್ಯದ ನಿಯೋಗವೊಂದು (state delegation) ಯುಎಸ್ ಗೆ ಹೋಗಿದ್ದಾಗ ₹ 21,745 ಕೋಟಿ ಹೂಡಿಕೆಯನ್ನು ತರಲಾಗಿತ್ತು, ನಿವೇಶನ ತೊಡಗಿಸಿದ ಕಂಪನಿಗಳಲ್ಲಿ ಹಲವಾರು ಪ್ರತಿಷ್ಠಿತ ಸಂಸ್ಥೆಗಳಿದ್ದವು ಮತ್ತು ಅದರಿಂದ 18-20 ಸಾವಿರ ಜನರಿಗೆ ಉದ್ಯೋಗ ಸಿಕ್ಕಿತ್ತು ಎಂದು ಸಚಿವ ಹೇಳಿದರು. ಈ ಬಾರಿ ಹೋಗದ ಕಾರಣ ಭಾರೀ ಪ್ರಮಾಣದ ನಷ್ಟದೊಂದಿಗೆ ಸುಮಾರು 4-5ಸಾವಿರ ಜನಕ್ಕೆ ಕೆಲಸ ಸಿಗುವ ಅವಕಾಶ ಕೈತಪ್ಪಿದೆ ಎಂದು ಖರ್ಗೆ ವಿಷಾದ ವ್ಯಕ್ತಪಡಿಸಿದರು. ವೀಸಾ ನಿರಾಕರಣೆ ಬಗ್ಗೆ ವಿದೇಶಾಂಗ ಖಾತೆ ಸಚಿವರಿಗೆ ಪತ್ರ ಬರೆದು ಮೂರು ದಿನವಾದರೂ ಉತ್ತರವಿಲ್ಲ, ಕನಿಷ್ಟ ಯಾಕೆ ಅನುಮತಿ ನಿರಾಕರಿಸಲಾಯಿತು ಅಂತನಾದರೂ ಹೇಳಲಿ, ಈ ಭೇಟಿಯಿಂದ ರಾಜ್ಯಕ್ಕಾಗಲೀ, ದೇಶಕ್ಕಾಗಲೀ ಪ್ರಯೋಜನ ಇಲ್ಲ ಅಂತ ಕೇಂದ್ರ ಹೇಳಿದರೆ ಅದನ್ನು ಅಂಗೀಕರಿಸುತ್ತೇವೆ ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ:  ನಾವು ಆಟ ಆಡಲು ವಿದೇಶಕ್ಕೆ ಹೋಗ್ತಿಲ್ಲ: ಅಮೆರಿಕಕ್ಕೆ ತೆರಳಲು ಅನುಮತಿ ನೀಡದ್ದಕ್ಕೆ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *