
ಮೇಷ ರಾಶಿ:
ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಿಂದಾಗದ ಕೆಲಸವನ್ನು ನೀವು ಒಪ್ಪಿಕೊಳ್ಳಲಾರಿರಿ. ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ ಸಂದರ್ಭೋಚಿತ ಮಾತುಗಳಿಂದ ಗೆಲ್ಲಬಹುದು. ನಂಬಿಕೆ ದ್ರೋಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿ ಕಡಿಮೆ ಆಗುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆ ವಿವರಗಳನ್ನು ಹಂಚಿಕೊಳ್ಳುವಿರಿ.
ವೃಷಭ ರಾಶಿ:
ಮೋಸದ ಜಾಲಕ್ಕೆ ಸಿಕ್ಕುವ, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಕೊಟ್ಟ ಹಣವನ್ನು ಹಿಂದಿರುಗಿಸುವಿರಿ. ಚಾಂಚಲ್ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟವಾಯಿತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಹೊಸ ಮನೆಯನ್ನು ಖರೀದಿಸುವ ಬಗ್ಗೆ ಸಂಗಾತಿಯ ಜೊತೆ ಚರ್ಚಿಸಿ.
ಮಿಥುನ ರಾಶಿ:
ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಲಕುವರು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಇದು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದರೆ ಇಂದು ಸಿಗಬಹುದು. ಸ್ನೇಹಿತರಿಂದ ನಿಮಗೆ ಬಹುಮಾನ ಸಿಗಬಹುದು. ದೂರದವರಿಗೆ ಒಬ್ಬರೇ ವಾಹನ ಚಾಲಾಯಿಸುವಿರಿ.
ಕರ್ಕಾಟಕ ರಾಶಿ:
ವ್ಯಾಪಾರ ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ಮಾತನ್ನು ನೀವು ನಿಯಂತ್ರಿಸಲ್ಪಟ್ಟಿದ್ದೀರಿ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕ ಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ’ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆ ಅಚ್ಚರಿ ಆಗಬಹುದು.
ಸಿಂಹ ರಾಶಿ:
ನಿರಂತರ ಕೆಲಸವನ್ನು ಮಾಡುವುದು ಇಷ್ಟ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೋರಂಜನೆಗೆ ಹೋದರೂ ಸರಿಯಾದ ಆಸ್ವಾದನೆ ಸಿಗದು. ಅತಿಯಾದ ಹಸಿವಾಗಬಹುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಇಂದು ಸಮಯವನ್ನು ಕಳೆಯುವುದು ಕಷ್ಟವಸದೀತು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ.
ಕನ್ಯಾ ರಾಶಿ:
ಕಳೆದುಕೊಂಡ ಮಾತ್ರಕ್ಕೆ ಪಡೆಯಲಾಗದು ಎಂಬ ಭಾವ ಬೇ. ಉತ್ತಮವಾದುದನ್ನು ಪಡೆಯುವ ಚಮತ್ಕಾರ. ನಿಮ್ಮ ಸಂಬಂಧವನ್ನು ನೀವು ಉಳಿಸಿಕೊಳ್ಳಬೇಕು. ನೀವು ಯಾರಿಗೂ ಸಾಲ ನೀಡಬಾರದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ನಿದ್ರೆಯಲ್ಲಿ ದುಃಸ್ವಪ್ನಗಳು ಬೀಳಬಹುದು. ಮನೆಯ ಖರ್ಚುಗಳನ್ನು ಸ್ವಲ್ಪ ನಿಯಂತ್ರಿಸಬೇಕು. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿರಿ. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ.
ತುಲಾ ರಾಶಿ:
ಸಮ್ಮಾನಗಳಿಂದ ಸಮಾಧಾನ ಇರದು.’ ಬೇರೆ ಯೋಚನೆಯೇ ನಿಮ್ಮದು. ನಿಮ್ಮ ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ಖರ್ಚು. ನಿಮ್ಮ ಮನಸ್ಸು ತೊಂದರೆಗೀಡಾಗಿಯೇ ಇರುತ್ತದೆ. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಿದೆ. ಸಂಸ್ಥೆಯ ಮುಖ್ಯಸ್ಥರಾಗಲು ಆಹ್ವಾನ ಬರಬಹುದು. ಪಡೆಯುವುದನ್ನು ಸಹಿಸುವುದು ಅನಿವಾರ್ಯವಾದೀತು. ಅನಪೇಕ್ಷಿತ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ.
ವೃಶ್ಚಿಕ ರಾಶಿ:
ನಿಮ್ಮ ಕೆಲಸವನ್ನು ಬೇರೆಯವರಿಗೆ ವಹಿಸಬೇಡಿ. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳಿ. ಕೆಲವು ಹಳೆಯ ಒಪ್ಪಂದಗಳು ಸಮಯಕ್ಕೆ ಸರಿಯಾಗಿ ಅಂತಿಮಗೊಳ್ಳದ ಕಾರಣ ನೀವು ನಷ್ಟವನ್ನು ಅನುಭವಿಸಬಹುದು. ಸ್ತ್ರೀಯರಿಂದ ಕೆಲವು ಸಮಸ್ಯೆಯು ಬರಲಿದೆ. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ನಿಮಗೆ ಕಷ್ಟವಾದೀತು. ಪರೀಕ್ಷೆಯಲ್ಲಿ ಉತ್ತಮ ಸಾಧನೆಗೆ ಸಿದ್ಧತೆ ನಡೆಸಲು. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ.
ಧನು ರಾಶಿ:
ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ. ಅಸಂಬದ್ಧ ಮಾತುಗಳ ನಿಮ್ಮ ವ್ಯಕ್ತಿತ್ವವನ್ನು ತಿಳಿಸುವುದು. ಬೇಡವೆಂದುಕೊಂಡ ವಿಷಯವೂ ನಿಮ್ಮ ಬಳಿ ಸುತ್ತಿ ಬರುವುದು. ನೂತನ ನಿರ್ಮಾಣಗಳಿಗೆ ತಡೆಯುವುದು. ನಿಮ್ಮ ಎದುರಾಳಿ ನಿಮ್ಮನ್ನು ಸೋಲಿಸಬಹುದು. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ. ಉತ್ತಮ ಭೂಮಿಯ ಲಾಭವನ್ನು ಪಡೆದುಕೊಳ್ಳಿ.
ಮಕರ ರಾಶಿ:
ನಿಮ್ಮ ವ್ಯವಹಾರ ಮೊದಲಿಗಿಂತ ಹೆಚ್ಚಾಗಿ. ಗುಣದಲ್ಲಿ ಮತ್ಸರ ಬಿಟ್ಟು ಒಳ್ಳೆಯದರ ಕಡೆಗೆ ಹೊರಟುಬಿಡಿ. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ಸಾಲದಿಂದ ನಿಮ್ಮ ಬಗ್ಗೆ ಬೇಡದ ಅಭಿಪ್ರಾಯಗಳು ಬರಬಹುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಹತ್ತಿರದ ಬಂಧುಗಳಿಂದ ವಿಶ್ವಾಸಕ್ಕೆ ತೊಂದರೆಯಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸಿ.
ಕುಂಭ ರಾಶಿ:
ನೀವು ಕೆಲವು ಹೊಸ ಯೋಜನೆಯಲ್ಲಿ ಕೆಲಸ ಮಾಡಬಹುದು. ಕುಟುಂಬದ ವಿಷಯಗಳಿಗೆ ನಿಮ್ಮ ಒತ್ತಡ ಸ್ಥಿರವಾಗಿದೆ. ಇಂದಿನ ಸಮಯವನ್ನು ಸದ್ವಿನಿಯೋಗ ಮಾಡಿಕೊಳ್ಳುವಿರಿ. ಪ್ರಾರಂಭಿಸಿದ ಕಾರ್ಯವನ್ನು ಮೊಟುಕುಗೊಳಿಸುವಿರಿ. ನಿಮ್ಮ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಾಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದಾರೆ.
ಮೀನ ರಾಶಿ:
ಬೇರೆಯವರ ವಿಷಯಗಳಲ್ಲಿ ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಬೇಕು. ಖರ್ಚುಗಳನ್ನು ನಿಯಂತ್ರಿಸಲು ಹೋಗಿ ಅಪಮಾನದಲ್ಲಿ ಸಿಲುಕುವಿರಿ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ಅಪ್ರಯೋಜಕ ಸಂಗತಿಗಳು ಮುಖ್ಯವಾದೀತು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಕಾರ್ಯಕ್ರಮ : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ವಜ್ರ, – ಕರಣ ಸೂರ್ಯ, – ೬೦ ಕೌಲವ, – ೬೦ ಕೌಲವ, – ೬೦ ಕೌಲವ, – ೬ ೦. 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:34 – 14:04, ಯಮಗಂಡ ಕಾಲ 08:06 – 09:35, ಗುಳಿಕ ಕಾಲ 11:05 – 12:34
-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)