Headlines

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕೆ

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕೆ


ಎಲ್ಪಿಜಿ ಸಿಲಿಂಡರ್ ಸಿಗದೆ ಪರದಾಟ: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕೆ

ಬೆಂಗಳೂರು, ಮಾರ್ಚ್ 12: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕರ್ನಾಟಕ ರಾಜ್ಯವು ಎಲ್ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್‌ಗಳು ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ ಅವು ಲಭ್ಯವಿಲ್ಲದೇ ಕಷ್ಟಸಾಧ್ಯವಾಗಿದೆ. ಈ ಹಲವು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ತಲುಪಿವೆ ಅಥವಾ ಅವರ ಮೆನುವಿನ ವಸ್ತುಗಳನ್ನು ಗಣನೀಯವಾಗಿ ಕಡಿಮೆ ಮಾಡಲಾಗಿದೆ. ಲಭ್ಯವಿರುವ ಹೋಟೆಲ್‌ಗಳನ್ನು ಅವಲಂಬಿಸಿರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಆಹಾರದ ಕೊರತೆ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯ ನಡುವೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ನಾಗರಿಕರಿಗೆ ಬುಕಿಂಗ್ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಸಿಲಿಂಡರ್ಗಳನ್ನು ಮನೆಗಳಿಗೆ ವಿತರಿಸಲಾಗುವುದು. ಜೊತೆಗೆ, ಎಲ್‌ಪಿಜಿ ಸಿಲಿಂಡರ್ ಉತ್ಪಾದನೆಯಲ್ಲಿ ಶೇಕಡಾ 25ರಷ್ಟು ಹೆಚ್ಚಿಸಲಾಗಿದೆ ಮತ್ತು ಹೊಸ ಮೂಲಗಳಿಂದ ಎಲ್‌ಎನ್‌ಜಿ ಸರಕುಗಳನ್ನು ಖರೀದಿಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *