ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು

ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು


ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು, ಮಾರ್ಚ್ 12: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ. ಈ ಸಂಪುಟ ಸಭೆಯಲ್ಲಿ ಒಟ್ಟು 28 ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಮಂಡ್ಯದ ಮೈಶುಗರ್ ಕಾರ್ಖಾನೆ ನಿರ್ಮಾಣ ಸೇರಿದಂತೆ 76 ಕರ್ನಾಟಕ ಪಬ್ಲಿಕ್ ಶಾಲೆಗಳ ಉನ್ನತೀಕರಣಕ್ಕಾಗಿ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

813 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ

ಕೆಎಚ್‌ಬಿ ಸೂರ್ಯಸಿಟಿಯಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮಹತ್ವದ ಅನುಮೋದನೆ ನೀಡಿದೆ. ಬೆಂಗಳೂರು ನಗರದ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಸುಮಾರು 75 ಕೋಟಿ ಜಮೀನಿನಲ್ಲಿ ಸುಮಾರು 813 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್: ಲೀಟರ್ ಹಾಲಿಗೆ ಪ್ರೋತ್ಸಾಹಧನ ಘೋಷಿಸಿದ ಬಮೂಲ್

ನಗರದ ಸುತ್ತಮುತ್ತಲಿನ ವಾಣಿಜ್ಯ ಮಳಿಗೆಗಳು ಮತ್ತು ಇತರ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯೂ ರೂಪಿಸಲಾಗಿದೆ. ಈ ಕಟ್ಟಡ ಕಾಮಗಾರಿಗಳ ಪರಿಷ್ಕೃತ ವೆಚ್ಚದ ವಿವರಗಳನ್ನು ಸಿದ್ಧಪಡಿಸಿ ಮುಂದಿನ ಸಚಿವ ಸಂಪುಟ ಸಭೆಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಸ್ಥಾಪಿಸುವ ಈ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಹತ್ವದ ಹೆಜ್ಜೆಯಾಗಲಿದೆ.

682 ಕೋಟಿ ರೂ ವೆಚ್ಚದಲ್ಲಿ ಶಾಲೆಗಳ ಉನ್ನತೀಕರಣ

76 ಮೌಲಾನಾ ಆಜಾದ್ ಆಂಗ್ಲ ಶಾಲೆಗಳ ಮಾದರಿಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಉನ್ನತೀಕರಣಗೊಳಿಸಲು ನಿರ್ಧರಿಸಲಾಗಿದೆ. 41 ಉರ್ದು ಮಾಧ್ಯಮ ಶಾಲೆ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ 682 ಕೋಟಿ ರೂ ವೆಚ್ಚದಲ್ಲಿ ಉನ್ನತೀಕರಿಸಲು ಸಂಪುಟ ಸಮ್ಮತಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಇನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ನಾಲೆ ಅಭಿವೃದ್ಧಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮಂಡ್ಯ ಕ್ಷೇತ್ರದ ಕಾವೇರಿ ಶಾಖಾ ನಾಲೆ, ಕೆರೆಗೋಡು ಶಾಖಾ ನಾಲೆ, ಶಿಂಷಾ ಶಾಖಾ ನಾಲೆ ಸೇರಿದಂತೆ ನಾಲ್ಕು ಕಾವೇರಿ ವಿತರಣಾ ನಾಲೆಗಳು ಮತ್ತು ಪಿಕಾಪ್ ನಾಲೆಗಳ ಆಧುನೀಕರಣಕ್ಕೆ 100 ಕೋಟಿ ರೂ ಅನುದಾನ ನೀಡುವಂತೆ ಸಚಿವ ಸಂಪುಟ ಅಸ್ತು ಎಂದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *