Headlines

ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?


ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು, ಮಾರ್ಚ್ 13: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಬಾಲಕಿಯರ ವಸತಿ ನಿಲಯ (ಬಾಲಕಿಯರ ಹಾಸ್ಟೆಲ್) ಅಭಿವೃದ್ಧಿ ಕಾಣದೆ ಪಾಳು ಬಿದ್ದಿದೆ. ಗ್ರಾಮದಲ್ಲಿ ಇರುವ ಪಾರಂಪರಿಕ ನಂಬಿಕೆಯನ್ನು ನೆಪ ಮಾಡಿಕೊಂಡು ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರಿಸುತ್ತಿದೆಯೇ ಎಂಬ ಪ್ರಶ್ನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಸುಮಾರು 69 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಸ್ತೂರಿಬಾ ಬಾಲಕಿಯರ ವಿದ್ಯಾರ್ಥಿನಿಲಯ ಕಳೆದ ಎಂಟು ವರ್ಷಗಳಿಂದ ಖಾಲಿ ಬಿದ್ದಿದ್ದು, ಇದು ಇದೀಗ ವಿವಾದಕ್ಕೆ ಕಾರಣವಾಗಿದೆ.

ನಿರ್ಮಾಣವಾದ ಒಂದು ತಿಂಗಳಲ್ಲೇ ಖಾಲಿಯಾದ ಕಟ್ಟಡ

2015ರಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅನುಕೂಲವಾಗುವಂತೆ ಈ ಬಾಲಕಿಯರ ನಿಲಯ ನಿರ್ಮಿಸಲಾಗಿದೆ. ಆದರೆ ನಿರ್ಮಾಣವಾದ ಕೇವಲ ಒಂದು ತಿಂಗಳಲ್ಲೇ ವಿದ್ಯಾರ್ಥಿನಿಯರ ಕೊರತೆಯಿಂದ ನಿಲಯವನ್ನು ಬಂದ್ ಮಾಡಲಾಗಿದೆ. ಅದಾದ ಬಳಿಕ ಈ ವಿದ್ಯಾರ್ಥಿನಿಲಯ ಬಳಸಲಾಗದೇ ಖಾಲಿಯಾಗಿಯೇ ಉಳಿದಿದೆ.

ಗ್ರಾಮಸ್ಥರ ಪಾರಂಪರಿಕ ನಂಬಿಕೆ

ವಿದ್ಯಾರ್ಥಿನಿಲಯದ ಸಮೀಪದಲ್ಲಿರುವ ಏಳುಮಂದೆಮ್ಮ ದೇವಾಲಯದ ಈ ಪ್ರದೇಶದಲ್ಲಿ ಮಹಿಳೆಯರು ಸಂಚರಿಸುವುದು ಅಪವಿತ್ರ ಎಂದು ಗ್ರಾಮಸ್ಥರು ನಂಬುತ್ತಾರೆ. ಮುಟ್ಟಾದ ಮಹಿಳೆಯರು ಅಥವಾ ಬಾಣಂತಿಯರು ಈ ಜಾಗದಲ್ಲಿ ಸಂಚರಿಸಿದರೆ ದೇವಿ ಮುನಿಸಿಕೊಳ್ಳುತ್ತಾಳೆ ಎಂಬ ಭಯ ಗ್ರಾಮಸ್ಥರಲ್ಲಿದೆ. ಈ ಕಾರಣದಿಂದ ತಮ್ಮ ಹೆಣ್ಣುಮಕ್ಕಳನ್ನು ಈ ವಿದ್ಯಾರ್ಥಿನಿಲಯಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕೆಲ ಮಕ್ಕಳು ಹೇಳಿದ್ದಾರೆ.

ಇದನ್ನೂ ಓದಿ ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ಸರ್ಕಾರ ಕುಂಟು ನೆಪ ಹೇಳುತ್ತಿದೆ ಎನ್ನುತ್ತಿರುವ ಗ್ರಾಮಸ್ಥರು

ಆದರೆ ಯಾರೋ ಒಬ್ಬರು ಈ ಮೌಢ್ಯವನ್ನು ನೆಪ ಮಾಡಿಕೊಂಡ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಯಾವುದೇ ಕಾರ್ಯವನ್ನು ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ವಿದ್ಯಾರ್ಥಿನಿಲಯವನ್ನು ಸರಿಯಾಗಿ ನಿರ್ವಹಿಸಿ, ಭದ್ರತೆ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡದೇ ಕಾಂಟ್ರಾಕ್ಟ್ ಮೂಲಕ ಖಾಸಗಿಯವರಿಗೆ ಈ ಸ್ಥಿತಿ ಉಂಟಾಗಿದೆ ಎಂದು ಕೆಲ ಗ್ರಾಮಸ್ಥರು ದೂರಿದ್ದಾರೆ.

ಅರ್ಚಕರು ಹೇಳಿದ್ದೇನು?

ಇದರ ನಡುವೆ ದೇವಸ್ಥಾನದ ಅರ್ಚಕರು ಈ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿನಿಲಯವು ದೇವಾಲಯದ ಗಡಿಯ ಹೊರಗಿದ್ದು ದೇವಸ್ಥಾನಕ್ಕೂ ಹಾಸ್ಟೆಲ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಮೌಢ್ಯ ನಂಬಿಕೆ, ಆಡಳಿತಾತ್ಮಕ ನಿರ್ಲಕ್ಷ್ಯ ಮತ್ತು ಅಭಿವೃದ್ಧಿಯ ಕೊರತೆ ನಡುವೆ 8 ವರ್ಷಗಳಿಂದ ಬಾಲಕಿಯರ ನಿಲಯ ಖಾಲಿ ಬಿದ್ದಿರುವುದು ಶಿಕ್ಷಣ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *