ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು


ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

ಮೇಷ ರಾಶಿ:

ಧನಾರ್ಜನೆಗೆ ಹೆಚ್ಚಿನ ಅವಕಾಶಗಳು ಲಭ್ಯವಾಗುವಂತೆ ಉತ್ತಮ ಆದಾಯವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ ಇದರಿಂದ ಕೆಲವು ಅಪಾಯಗಳನ್ನು ಎದುರಿಸಬೇಕಾಗುವುದು. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯನ್ನು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳ ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಹಲವು ದಿನದ ಮನಸ್ತಾಪವು ದೂರವಾಗುತ್ತದೆ.

ವೃಷಭ ರಾಶಿ:

ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುವಿರಿ. ಆದರೆ ಅವರಿಂದ ಅದು ಸಿಗದು. ನಿಮ್ಮ ವ್ಯವಹಾರವನ್ನು ಅಳೆಯುವುದು ಸುಲಭವಲ್ಲ. ಜ್ಞಾನದಿಂದ ತಪ್ಪುಗಳು ನಡೆಯಬಹುದು. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಇಂದು ಒಂಟಿಯಾದಂತೆ ನಿಮಗೆ ಅನ್ನಿಸಬಹುದು. ಅತಿಯಾದ ಕೋಪವನ್ನು ಮಾಡಿಕೊಳ್ಳುವುದು ಬೇಡ.

ಮಿಥುನ ರಾಶಿ:

ಅನಿರೀಕ್ಷಿತ ನಿಧಿಯ ನಿರೀಕ್ಷೆಯಲ್ಲಿ ಇರುವಿರಿ. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ಅಂದುಕೊಂಡಿದ್ದರ ವಿರುದ್ಧ ನಡೆಯುವುದು ನಿಮಗೆ ಬೇಸರ ತರಬಹುದು. ನಿಮ್ಮ ವ್ಯಕ್ತಿತ್ವದ ಬಗ್ಗೆ ಹೆಮ್ಮೆಪಡುವರು. ಪ್ರಶಂಸೆಯಿಂದ ಅಹಂಕಾರವು ಬರುವ ಸಾಧ್ಯತೆ ಇದೆ. ಕುಟುಂಬಕ್ಕೆ ಹೆಚ್ಚು ಸಮಯವನ್ನು ಕೊಡುವಿರಿ. ಸಣ್ಣ ವಸ್ತುವನ್ನು ದಾನ ಮಾಡಿ ಸಂತೋಷಪಡುವಿರಿ.

ಕರ್ಕಾಟಕ ರಾಶಿ:

ಇಂದು ಎಲ್ಲದಕ್ಕೂ ಯಂತ್ರದ ಮೊರೆ ಹೋಗುವುದರಿಂದ ನಿಮಗೆ ಕಷ್ಟ. ಸಹೋದ್ಯೋಗಿಗಳು ಅಹಂಕಾರವನ್ನು ತೋರಿಸುತ್ತದೆ. ನಿಮ್ಮ ನಿಲುವಿನಲ್ಲಿ ನೀವಿರುವುದು ಉತ್ತಮ. ಬೇಕೆಂದುಕೊಂಡಿದ್ದನ್ನು ಪಡೆಯುವುದು ಕಷ್ಟವಾಗುವುದು. ಗೊತ್ತಿಲ್ಲದ ಕಾರ್ಯವನ್ನು ಮಾಡಲು ನಿಮಗೆ ಉತ್ಸಾಹ ಇರಲಿದೆ. ಇತರ ವಸ್ತುವಿನ ಬಗ್ಗೆ ಮೋಹವು ಇರುವುದು. ಆತ್ಮಪ್ರಶಂಸೆಯು ಅಧಿಕವಾಗಿ ತೋರುವುದು. ಮಾಧ್ಯಮ ಕ್ಷೇತ್ರದಲ್ಲಿ ಇರುವವರಿಗೆ ಮೇಲುಗೈ ಸಾಧಿಸುವ ಅವಕಾಶವಿದೆ.

ಸಿಂಹ ರಾಶಿ:

ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ತಂತ್ರಜ್ಞಾನದಿಂದ ಅನ್ಯ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಸಿಗಲಿದೆ. ನೂತನ ವಾಹನದ ಖರೀದಿಗೆ ಪರವಾನಿಗೆ ಹೋಗುವಿರಿ. ಮೊದಲೇ ನಿಶ್ಚಯಪಡಿಸಿದ ಕಾರ್ಯವನ್ನು ಬಿಟ್ಟು ಬೇರೆ ಯೋಚನೆ ಮಾಡುವುದು ಬೇಡ. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸಿರಿ. ನಿಮ್ಮ ಕಾಯ ಇನ್ನೂ ಸಾರ್ಥಕವಾಗುತ್ತದೆ. ಮಾತಿನಲ್ಲಿ ಮಾರ್ದವ ಇರಲಿ.

ಕನ್ಯಾ ರಾಶಿ:

ಇಂದು ಮಕ್ಕಳ ವಿಚಾರವಾಗಿ ನಿಮಗೆ ದೂರು ಬರಬಹುದು. ವಿವಾಹದ ಬಗ್ಗೆ ಯೋಚಿಸುವವರು ಯಾರು ಇಲ್ಲ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆ ಸೂಕ್ತ ಚಿಕಿತ್ಸೆ ಅಗತ್ಯ. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ಅಪಮಾನದಿಂದ ಮನಸ್ಸು ಉಗ್ರರೂಪಕ್ಕೆ ಬದಲಾಗಬಹುದು. ಯಾರ ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ.

ತುಲಾ ರಾಶಿ:

ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಲು ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ವಿದೇಶಕ್ಕೆ ತೆರಳುವ ನಿರೀಕ್ಷೆಯಲ್ಲಿ ಇರುವಿರಿ. ಮನಸ್ಸಿಗೆ ಹಿಡಿಸಿದ ಕೆಲಸವನ್ನು ಮಾತ್ರ ಬೇಗ ಮಾಡಿ ಮುಗಿಸಿ. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು.

ವೃಶ್ಚಿಕ ರಾಶಿ:

ಬಂಧುಗಳ ಕುಹಕಕ್ಕೆ ಸಿಲುಕುವಿರಿ. ನ್ಯಾಯಾಲಯದ ಹೋರಾಟವು ಅಪಯಶಸ್ಸನ್ನು ಕೊಡಬಹುದು. ಕಲಾವಂತಿಕೆಯಿಂದ ನಿಮ್ಮ ಯಾವುದೇ ನಕಾರಾತ್ಮಕ ವಿಚಾರಗಳು ಮರೆಯಾಗಬಹುದು. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿರಿ. ದಾನದಿಂದ ಸಮಾಧಾನ ಸಿಗುವ ಸಾಧ್ಯತೆ ಇದೆ. ಇತರರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು.

ಧನು ರಾಶಿ:

ಹಿರಿಯರ ಕೋಪಕ್ಕೆ ನೀವು ಬಲಿಯಾಗಬೇಕಾದೀತು. ಮಾನಸಿಕವಾದ ಅಸ್ಥಿರತೆಯಿಂದ ನಿಮಗೆ ಕಷ್ಟವಾದೀತು. ವೃತ್ತಿಯಲ್ಲಿ ನಿಮಗೆ ತೃಪ್ತಿಯು ಸಿಗಲಿದೆ. ಧಾರ್ಮಿಕ ವಿಚಾರವಾಗಿ ನೀವು ದೂರ ಪ್ರಯಾಣವನ್ನು ಮಾಡುತ್ತೀರಿ. ಎಲ್ಲ ಕೆಲಸದಲ್ಲಿ ಆತ್ಮತೃಪ್ತಿಯನ್ನು ಬಯಸುಬಿರಿ. ನಿಮ್ಮ ಮಾತುಗಳೇ ನಿಮಗೆ ಮುಳುವಾಗುವ ಸಾಧ್ಯತೆ ಇದೆ. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಇಂದು ಸಂದರ್ಭವನ್ನು ನೋಡಿಕೊಂಡು ಮಾತನಾಡಿ.

ಮಕರ ರಾಶಿ:

ಆರ್ಥಿಕತೆಯಲ್ಲಿ ನೀವು ನಂಬಿಕೆಯನ್ನು ಉಳಿಸಿಕೊಳ್ಳಬೇಕು. ನಿಮ್ಮ ಬಾಗುವ ಸ್ವಭಾವವು ನಿಮ್ಮನ್ನು ಮೇಲಕ್ಕೆ ಏರಿಸುವುದು. ಹೇಳಿಕೊಳ್ಳಲಾಗದ ಸಂಕಟವನ್ನು ಮನಸ್ಸಿನಲ್ಲಿಯೇ ನುಂಗುವಿರಿ. ಪ್ರಭಾವಿ ಗಣ್ಯರ ಜೊತೆ ಸಮಯವನ್ನು ಕಳೆಯುವಿರಿ. ಪ್ರೀತಿಯನ್ನು ಕುಟುಂಬದ ಜೊತೆ ಹಂಚಿಕೊಳ್ಳುವಿರಿ. ಮನೆತನದ ಕಾರಣದಿಂದ ನಿಮಗೆ ಗೌರವ ಪ್ರಾಪ್ತ ವಸ್ತು. ಮೇಲಧಿಕಾರಿಗಳನ್ನು ಮೆಚ್ಚಿಸುವಿರಿ. ನಿಮ್ಮ ಮೌನವನ್ನು ಅನ್ಯರೀತಿಯಲ್ಲಿ ಅರ್ಥೈಸಿಕೊಳ್ಳಬಹುದು.

ಕುಂಭ ರಾಶಿ:

ನಿಮ್ಮ ಬದುಕಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ. ಬರುವ ಹಣವು ಕೈಸೇರಿದರೂ ಖರ್ಚಿನ ಮುಕ್ತವಾಗಿರುವುದು ಮಕ್ಕಳಿಗೆ ಸಿಗುವ ಪುರಸ್ಕಾರದಿಂದ ನಿಮಗೆ ಸಂತೋಷವಾಗುತ್ತದೆ. ಅಪರೂಪದ ಮಿತ್ರರು ನಿಮ್ಮನ್ನು ಭೇಟಿ ಮಾಡುತ್ತಾರೆ. ದಿನಸಿ ವ್ಯಾಪಾರಿಗಳಿಗೆ ಉತ್ತಮ ಲಾಭ ಆಗಲಿದೆ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ. ಏಕಪಕ್ಷೀಯವಾದ ನಿರ್ಧಾರದಿಂದ ನಿಮ್ಮವರಿಗೆ ಬೇಸರವಾದೀತು.

ಮೀನ ರಾಶಿ:

ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ಅಭಾವವು ಹೆಚ್ಚು ತೋರುವುದು. ಹೂಡಿಕೆಯಿಂದ ನಷ್ಟ ಸಂಭವ. ತಾಯಿ ಮೇಲೆ ಪ್ರೀತಿ ಹೆಚ್ಚಾಗುವುದು. ಅವರಿಗೆ ಖುಷಿಯಾಗುವಂತೆ ನಡೆದುಕೊಳ್ಳುವಿರಿ. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಬಂಧುಗಳ ಕಾರಣಕ್ಕಾಗಿ ಧನವ್ಯಯವಾಗುವುದು. ನಿಮ್ಮ ಆಸ್ತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಕಾರ್ಯಕ್ರಮ : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಏಕಾದಶೀ, ನಿತ್ಯ ಸೂರ್ಯನಕ್ಷತ್ರ : ಶ್ರವಣ, ಯೋಗ : ಪರಿಘ, ಕರಣ – 3 ಸ್ತವ, ೬, ಸ್ತ, ೬. 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:03 – 18:34, ಯಮಗಂಡ ಕಾಲ 12:33 – 14:03, ಗುಳಿಕ ಕಾಲ 15:33 – 17:33

-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)



Source link

Leave a Reply

Your email address will not be published. Required fields are marked *