
ದೆಹಲಿ, ಮಾರ್ಚ್ 15: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯೋಗದ ಅಧ್ಯಕ್ಷೇಶ್ ಕುಮಾರ್ ಅವರು ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 9 ರಂದು ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಮೇ 4 ರಂದು ಫಲಿತಾಂಶ ಪ್ರಕಟ. ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವೆಂದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಾಗಿತ್ತು. ಇನ್ನು ಮಾರ್ಚ್ 16 ರಿಂದ ಉಪ ಚುನಾವಣೆ ಪ್ರಕಟವಾಗಲಿದ್ದು, ಮಾರ್ಚ್ 24 ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ರಂದು ನಾಮಪತ್ರ ಸಲ್ಲಿಸಲು ಕೊನೆ ದಿನ ಆಗಲಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ.)