
<p>KSRTC bus accident Honnavar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆರಂಗಡಿ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓಮ್ನಿ ಚಾಲಕ ಮೃತಪಟ್ಟಿದ್ದಾರೆ. </p><img><p>ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆರಂಗಡಿ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂ ಓಮ್ನಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓಮ್ನಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ.</p><p><strong>ಇದನ್ನೂ ಓದಿ:</strong><strong> ಉಪ ಚುನಾವಣೆ ಘೋಷಣೆ: ಬಾಗಲಕೋಟೆಯಲ್ಲಿ ರಾಜಕಾರಣಿಗಳ ಫ್ಲೆಕ್ಸ್, ಸರ್ಕಾರಿ ಜಾಹೀರಾತು ಮಫಲಕ ಬ್ಯಾನರ್ಗಳ ತೆರವು</strong></p><img><p>ಸಿದ್ದಾಪುರ ಮೂಲದ ಇಬ್ರಾಹಿಂ ಮೃತಪಟ್ಟವರಾಗಿದ್ದು, ಇವರು ಭಟ್ಕಳದಿಂದ ಸಿದ್ದಾಪುರದತ್ತ ಓಮ್ನಿ ಚಲಾಯಿಸಿಕೊಂಡು ಹೋಗುತ್ತಿರುವ ವೇಳೆ, ಗೇರುಸೊಪ್ಪದಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹೆರಂಗಡಿ ಸಮೀಪ ಡಿಕ್ಕಿ ಹೊಡೆದಿದೆ.</p><p><strong>ಇದನ್ನೂ ಓದಿ:</strong><strong> ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ</strong></p><img><p>ಅಪಘಾತದ ತೀವ್ರತೆಗೆ ಓಮ್ನಿ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಚಾಲಕ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಓಮ್ನಿ ಚಾಲಕ ಮೃತಪಟ್ಟಿದ್ದಾರೆ.</p><p><strong>ಇದನ್ನೂ ಓದಿ: </strong><strong>ಪಂಚರಾಜ್ಯ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಬದಲು ಈ ಬಾರಿ ಕೇವಲ 2 ಹಂತಗಳಲ್ಲಿ ಮತದಾನ ಏಕೆ?</strong></p><img><p>ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೂ ಚಿಕ್ಕಪುಟ್ಟ ಗಾಯಗಳಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p><strong>ಇದನ್ನೂ ಓದಿ:</strong><strong> ಸತ್ಯ ಬಯಲಾಗುವ ಮೊದಲೇ ಸಂಭ್ರಮಿಸಿ ಪೇಚಿಗೆ ಸಿಲುಕಿದ ಊರ ಜನ: ಆಗಿದ್ದೇನು?</strong></p>
Source link
ಹೊನ್ನಾವರ : KSRTC ಬಸ್ – ಓಮ್ನಿ ನಡುವೆ ಭೀಕರ ಅಪಘಾತ: ಓಮ್ನಿ ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವು