
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡರೆ, ಬೀದರ್ ಮತ್ತು ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.<img><p>ಇಂದು ಸಂಜೆ ವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮತ್ತೆ ಕೆಲವೆಡೆ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗ, ಬೀದರ್ ಬೆಳಗಾವಿಯಲ್ಲಿ ಮಳೆ ಜೋರಾಗಿ ಸುರಿದಿದೆ.</p><img><p>ಶಿವಮೊಗ್ಗದಲ್ಲಿಯೂ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಿದ್ದು, ಶಿವಮೊಗ್ಗ ಹೊರವಲಯದ ಗೋಪಿ ಶೆಟ್ಟಿ ಕೊಪ್ಪದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ತೆಂಗಿನ ಗರಿಗಳು ಹೊತ್ತಿ ಉರಿದಿದ್ದು, ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು.</p><img><p>ಹಾಗೆಯೇ ಬೀದರ್ನಲ್ಲಿಯೂ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಗಡಿ ಜಿಲ್ಲೆಯ ಜನರಿಗೆ ವರುಣ ತಂಪೆರೆದಿದ್ದಾನೆ. ಬೀದರ್ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.</p><img><p>ನಿರಂತರ ಮಳೆಗೆ ರಸ್ತೆಗಳು ಜಲಾವೃತವಾಗಿವೆ. ಭಾರಿ ಮಳೆಯಿಂದ ವಾಹನ ಸವಾರರ ಸಂಚರಿಸಲು ಪರದಾಟ ನಡೆಸಿದ್ದಾರೆ. ಔರಾದ್, ಕಮಲನಗರ, ಭಾಲ್ಕಿ, ಹುಲಸೂರು, ಬಸವಕಲ್ಯಾಣ, ಚಿಟಗುಪ್ಪಾ ಸೇರಿದಂತೆ ಹಲವೆಡೆ ಮಳೆಯಾಗಿದೆ.</p><img><p>ಬೆಳಗಾವಿಯಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ನಿರಂತರ ಒಂದು ಗಂಟೆ ಸುರಿದ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ ಚರಂಡಿಗಳು ಬ್ಲಾಕ್ ಆಗಿ ರಸ್ತೆಗಳಲ್ಲೇ ನೀರು ಹರಿದಿದ್ದರಿಂದ ಗ್ರಾಪಂ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>
Source link
ಬೀದರ್, ಬೆಳಗಾವಿಯಲ್ಲಿ ಭಾರಿ ಮಳೆ: ಶಿವಮೊಗ್ಗದಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ