Headlines

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ಕುಸಿತ: ಬೆಂಗಳೂರು-ಮೈಸೂರಿಗೆ ಕುಡಿಯುವ ನೀರಿನ ಆತಂಕ ಇದೆಯೇ?

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ಕುಸಿತ: ಬೆಂಗಳೂರು-ಮೈಸೂರಿಗೆ ಕುಡಿಯುವ ನೀರಿನ ಆತಂಕ ಇದೆಯೇ?



ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ಕುಸಿತ: ಬೆಂಗಳೂರು-ಮೈಸೂರಿಗೆ ಕುಡಿಯುವ ನೀರಿನ ಆತಂಕ ಇದೆಯೇ?
<p>ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಕುಸಿತದ ನಡುವೆಯೂ, ಜೂನ್-ಜುಲೈ ತಿಂಗಳವರೆಗೆ ಬೆಂಗಳೂರು, ಮೈಸೂರು, ಮಂಡ್ಯಕ್ಕೆ ಕುಡಿಯುವ ನೀರಿಗೆ ಯಾವುದೇ ಆತಂಕವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈತರ ಬೆಳೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುತ್ತಿದೆ.</p><img><p>ಮಂಡ್ಯ (ಮಾ.16): ಕನ್ನಡ ನಾಡಿನ ಜೀವನದಿ ಕಾವೇರಿ ನದಿಯ ಕೃಷ್ಣರಾಜ ಸಾಗರ (KRS) ಜಲಾಶಯದ ನೀರಿನ ಮಟ್ಟದಲ್ಲಿ ಇಳಿಕೆಯಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ತಲುಪಿದೆ. ಈ ಬೆಳವಣಿಗೆಯ ನಡುವೆಯೂ ಒಂದು ಸಮಾಧಾನಕರ ವಿಷಯವೆಂದರೆ, ಮುಂಬರುವ ಜೂನ್ ಮತ್ತು ಜುಲೈ ತಿಂಗಳವರೆಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ಆತಂಕ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ಮತ್ತು ತಜ್ಞರು ಭರವಸೆ ನೀಡಿದ್ದಾರೆ. ಆದರೆ, ಜೂನ್‌ ವೇಳೆಗೆ ಮಳೆಯಾಗದಿದ್ದರೆ ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗಳಿಎ ನೀರು ಬಿಡುವುದಕ್ಕೆ ಸಮಸ್ಯೆಯಾಗಲಿದೆ.</p><img><p>ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕನ್ನಂಬಾಡಿ ಬಳಿ ಇರುವ ಕೆಆರ್‌ಎಸ್ ಜಲಾಶಯದ ಗರಿಷ್ಠ ನೀರಿನ ಸಾಮರ್ಥ್ಯ 124.80 ಅಡಿಗಳು. ಕಳೆದ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿತ್ತು. ಆದರೆ, ಬೇಸಿಗೆಯ ಆರಂಭ ಹಾಗೂ ಕೃಷಿ ಚಟುವಟಿಕೆಗಳಿಗೆ ನೀರು ಹರಿಸುತ್ತಿರುವ ಕಾರಣ ನೀರಿನ ಮಟ್ಟದಲ್ಲಿ ಕುಸಿತ ಕಂಡುಬಂದಿದೆ. ಪ್ರಸ್ತುತ ಜಲಾಶಯದಲ್ಲಿ 32.167 ಟಿಎಂಸಿ (TMC) ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ನೀರಿನ ಮಟ್ಟ ಸುಮಾರು 110.94 ಅಡಿಗಳಷ್ಟಿತ್ತು ಎಂಬುದು ಗಮನಾರ್ಹ.</p><img><p>ನೀರಿನ ಮಟ್ಟ 110 ಅಡಿಗೆ ಇಳಿದ ತಕ್ಷಣವೇ ಜನರಲ್ಲಿ ಆತಂಕ ಮೂಡುವುದು ಸಹಜ. ಅದರಲ್ಲೂ ಕೆಆರ್‌ಎಸ್ ಜಲಾಶಯದ ನೀರನ್ನೇ ನಂಬಿಕೊಂಡಿರುವ ಮೈಸೂರು, ಬೆಂಗಳೂರು ಹಾಗೂ ಮಂಡ್ಯ ಭಾಗದ ಜನರಿಗೆ ಕುಡಿಯುವ ನೀರಿನ ಲಭ್ಯತೆಯ ಬಗ್ಗೆ ಆತಂಕವಿತ್ತು. ಆದರೆ, ಪ್ರಸ್ತುತ ಇರುವ 32 ಟಿಎಂಸಿಗೂ ಅಧಿಕ ನೀರು ಜೂನ್ ಅಥವಾ ಜುಲೈನಲ್ಲಿ ಮುಂಗಾರು ಮಳೆ ಆರಂಭವಾಗುವವರೆಗೆ ಸಾಲುತ್ತದೆ. ಆದ್ದರಿಂದ ನಗರವಾಸಿಗಳು ಹಾಗೂ ಗ್ರಾಮೀಣ ಭಾಗದ ಜನರು ಕುಡಿಯುವ ನೀರಿನ ಬಗ್ಗೆ ಸದ್ಯಕ್ಕೆ ತಲೆಕೆಡಿಸಿಕೊಳ್ಳಬೇಕಿಲ್ಲ.</p><img><p>ಕೇವಲ ಕುಡಿಯುವ ನೀರು ಮಾತ್ರವಲ್ಲದೆ, ಕೃಷಿ ಚಟುವಟಿಕೆಗಳಿಗೂ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಹಾಗೂ ಬೆಳೆಗಳನ್ನು ರಕ್ಷಿಸುವ ಸಲುವಾಗಿ ನಾಲೆಗಳಿಗೆ ‘ಕಟ್ಟು ಪದ್ಧತಿ’ಯಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಅಂದರೆ, ನಿಗದಿತ ದಿನಗಳ ಅಂತರದಲ್ಲಿ ಸರದಿಯಂತೆ ನಾಲೆಗಳಿಗೆ ನೀರು ಹರಿಸುವ ಮೂಲಕ ಲಭ್ಯವಿರುವ ನೀರನ್ನು ಮಿತವಾಗಿ ಮತ್ತು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಕೆರೆಗಳನ್ನು ತುಂಬಿಸಲು ಹಾಗೂ ನಿಂತ ಬೆಳೆಗಳಿಗೆ ನೀರು ಒದಗಿಸಲು ಅನುಕೂಲವಾಗಲಿದೆ.</p><img><p>ನೀರಿನ ಲಭ್ಯತೆ ಸದ್ಯಕ್ಕೆ ಸಾಕಷ್ಟಿದ್ದರೂ, ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ನೀರನ್ನು ಪೋಲು ಮಾಡದಂತೆ ಎಚ್ಚರಿಕೆ ವಹಿಸಬೇಕು. ಮುಂಗಾರು ಮಳೆ ವಿಳಂಬವಾದಲ್ಲಿ ಪರಿಸ್ಥಿತಿ ಬದಲಾಗಬಹುದು. ಆದ್ದರಿಂದ ಲಭ್ಯವಿರುವ ನೀರನ್ನು ಅತ್ಯಂತ ಜಾಗರೂಕತೆಯಿಂದ ಬಳಸುವುದೇ ಇಂದಿನ ಅಗತ್ಯವಾಗಿದೆ. ಒಟ್ಟಾರೆಯಾಗಿ, ಕೆಆರ್‌ಎಸ್ ಅಣೆಕಟ್ಟು ಈ ವರ್ಷದ ಬೇಸಿಗೆಯನ್ನು ನಿಭಾಯಿಸುವಷ್ಟು ಸಾಮರ್ಥ್ಯವನ್ನು ಹೊಂದಿದೆ ಎಂಬುದು ಆಶಾದಾಯಕ ಸಂಗತಿಯಾಗಿದೆ.</p>



Source link

Leave a Reply

Your email address will not be published. Required fields are marked *