
ಕೋಲಾರ, ಮಾರ್ಚ್ 18: ಕೋಲಾರ ಜಿಲ್ಲೆಯ ಎಫ್ಜಿ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡರೂ, ಆಂಬ್ಯುಲೆನ್ಸ್ನಲ್ಲಿ ಬಂದುಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದಾಳೆ. ಈ ಮೂಲಕ ಆಕೆ, ಅಸಾಧಾರಣ ಧೈರ್ಯ ಮತ್ತು ಮನೋಬಲಕ್ಕೆ ಮಾದರಿಯಾಗಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಾಗ, ಒಂದು ಶಸ್ತ್ರಚಿಕಿತ್ಸೆ ನಡೆದಿದ್ದು, ಇನ್ನೂ ಎರಡು ಶಸ್ತ್ರಚಿಕಿತ್ಸೆಗಳು ಆಗಿವೆ ಎಂದು ವೈದ್ಯರು ಸೂಚಿಸಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಂಡ ಕುಸುಮಾ ತನ್ನ ತಾಯಿಗೆ ಆಂಬುಲೆನ್ಸ್ ಮೂಲಕ ಕೆಜಿಎಫ್ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ಪರೀಕ್ಷಾ ಕೇಂದ್ರದಲ್ಲಿ ಸ್ಟ್ರೆಚರ್ ಬೆಡ್ ಮೇಲೆ ಆಕೆ ಪರೀಕ್ಷೆ ಬರೆದಿದ್ದು, ಆಕೆಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದೆ. ಕುಸುಮಾಳ ಹಠ, ಪರಿಶ್ರಮ ಮತ್ತು ಶಿಕ್ಷಣದ ಮೇಲಿನ ಬದ್ಧತೆ ಇದೀಗ ಅನೇಕರಿಗೆ ಸ್ಪೂರ್ತಿಯಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ