ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!

ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!


ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!

ನವದೆಹಲಿ, ಮಾರ್ಚ್ 19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಒಂದು ಘಟನೆ ನಡೆದಿದೆ. ತನ್ನ ಮಗಳನ್ನು ಶಾಲಾ ಬಸ್‌ಗೆ ಹತ್ತಿಸಲು ಸ್ಕೂಟಿಯಲ್ಲಿ ಬಂದಿದ್ದ ಮಹಿಳೆ ಇನ್ನೇನು ಯುವಕರು ಬೈಕ್‌ಗಳಲ್ಲಿ ಬಂದು ಆಕೆಯನ್ನು ಅಡ್ಡಗಟ್ಟಿದರು. ಆಕೆಯ ಕುತ್ತಿಗೆಯಲ್ಲಿ ಬ್ಯಾಡ್ ಸರ, ಕೈಯಲ್ಲಿದ್ದ ಬ್ಯಾಗ್ ಕಸಿದುಕೊಳ್ಳಲು ಪ್ರಯತ್ನಿಸಿದರು. ಆಕೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಯುಧಗಳನ್ನು ತೆಗೆದು ಆಕೆಯ ಮೇಲೆ ದಾಳಿ ಮಾಡಿದ್ದಾರೆ. ಇಷ್ಟೆಲ್ಲ ನಡೆದಿದ್ದು ಬೆಳಗ್ಗೆ ಜನರೆಲ್ಲ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗಲೇ. ಆದರೂ ಯಾರಿಗೂ ಹೆದರದ ಕಳ್ಳರು ಆಕೆಯನ್ನು ಲೂಟಿ ಮಾಡಿದ್ದಾರೆ. ಅಲ್ಲೇ ಬೈಕ್ ನಲ್ಲಿ ಹೋಗುತ್ತಿದ್ದವರು ಇದನ್ನು ನೋಡದಿದ್ದರೂ ತಮ್ಮಷ್ಟಕ್ಕೆ ಮುಂದೆ ಹೋಗಿದ್ದಾರೆ. ಇಡೀ ಘಟನೆ ಅಲ್ಲಿದ್ದ ರಸ್ತೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ದೆಹಲಿಯಲ್ಲಿ ಹಗಲು ಹೊತ್ತಿನಲ್ಲೂ ಜನರಿಗೆ ರಕ್ಷಣೆಯಿಲ್ಲವೇ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *