
ಮಂಗಳೂರು, ಮಾರ್ಚ್ 22: ಮಹಿಳೆಯರಿಗೆ ಕಿರುಕುಳ ಆರೋಪ ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶಕ್ಕೆ ಬಿಗ್ ಶಾಕ್ ಸಿಕ್ಕಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶದ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್ ಐಆರ್ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿದ್ದು ದೂರದಲ್ಲಿ ಉಲ್ಲೇಖಿಸಲಾಗಿದೆ.
2020ರಲ್ಲಿ ಸಂದೇಶ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದರು. ಹೀಗಾಗಿ ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಪ್ರಕರಣ ದಾಖಲಾಗಿದೆ. ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸರು ಹೇಳಿದ್ದಾರೆ. ಮಾಧ್ಯಮಗಳ ಮುಂದೆ ಬಂದಿದ್ದ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಪಿಐ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಮತ್ತು ಪ್ರೇರಿತವಾಗಿದೆ ಎಂದು ನಿನ್ನೆಯಷ್ಟೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆ ಬೆನ್ನಲ್ಲೇ ಈಗ ಸಂದೇಶದ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ.
ಇದನ್ನೂ ಓದಿ: ಇನ್ಸ್ಪೆಕ್ಟರ್ ಸಂದೇಶ ಕಾಮಕಾಂಡ ಕೇಸ್ಗೆ ಬಿಗ್ ಟ್ವಿಸ್ಟ್; ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು
ಸಂತ್ರಸ್ತೆ ಮಹಿಳೆ ಆರೋಪದ ಕೆಲ ಆಡಿಯೋ ವಿಡಿಯೋಗಳು ಬಯಲಿಗೆ ಬರುತ್ತಿದ್ದಂತೆಯೇ ಇನ್ಸ್ ಪೆಕ್ಟರ್ ವಿರುದ್ಧ ಪ್ರಕರಣದ ತನಿಖೆ ನಡೆಸಿ ವರದಿ ನೀಡಿದ ಹೊಣೆಯನ್ನು ಎಸ್ಸಿಪಿ ಶ್ರೀಕಾಂತ್ಗೆ ನೀಡಲಾಗಿದೆ. ಪ್ರಕರಣ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರನ್ನ ಭೇಟಿ ಮಾಡಿ ಸಂದೇಶ ಕಳುಹಿಸಿ ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದರು. ಈ ಬಗ್ಗೆ ಮಹಿಳಾ ಆಯೋಗ ಸಹ ಸುಮಾಟೋ ಕೇಸ್ ದಾಖಲಿಸಿಕೊಂಡು, ಪ್ರಕರಣದ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ಈ ಎಲ್ಲಾ ಬೆಳವಣಿಗೆಯ ನಂತರ ಇನ್ಸ್ ಪೆಕ್ಟರ್ ಸಂದೇಶ ಅವರಿಗೆ ಅಮಾನತು ಕೂಡ ಮಾಡಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.