
ಬೆಂಗಳೂರು, ಮಾರ್ಚ್ 22: ಎಂಬ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರಿನ ರಾಮಮೂರ್ತಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದಾನೆ (ಕೊಲೆ) ಮಾಡಲಾಗಿದೆ. ಇಂದು (ಮಾ.22)ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಟಿ.ಸಿ.ಪಾಳ್ಯ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಿರಣ್ (25) ಎಂಬ ಯುವಕನ ದುಷ್ಕರ್ಮಿಗಳು ತಲೆ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಸ್ಥಳಕ್ಕೆ ರಾಮ ನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ.
ಹಳೆಯ ದ್ವೇಷಕ್ಕೆ ನಡೀತಾ ಕೊಲೆ?
ಕುಡಿದು ಗಲಾಟೆ ಮಾಡಿದ ಪ್ರಕರಣಗಳು ಸೇರಿದಂತೆ ಕೊಲೆಯಾದ ಕಿರಣ್ ವಿರುದ್ಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂಬುದಾಗಿ ಪೊಲೀಸರು ಬಿಚ್ಚಿಟ್ಟಿದ್ದು, ಹಳೆಯ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಘಟನೆಯ ಮುನ್ನರಾತ್ರಿ ಕೂಡ ಕಿರಣ ಕುಡಿದು ಗಲಾಟೆ ಮಾಡಿದ್ದು, ತಡರಾತ್ರಿವರೆಗೆ ವಾಗ್ವಾದ ನಡೆದ ಬಳಿಕ ಮುಂಜಾನೆ ಈ ದಾಳಿ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಕೈಗೊಂಡಿದ್ದು, ಸುತ್ತಮುತ್ತಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಸ್ಥಳೀಯ ನಿವಾಸಿ ಗೋಪಾಲ್ ಮಾತನಾಡಿ, ಕಿರಣ್ ತನ್ನ ತಾಯಿಗೆ ಕಳೆದ ನಾಲ್ಕು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆಟೋ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಒಟ್ಟಾರೆ, ಈ ಕೊಲೆ ಪ್ರಕರಣದಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಚುರುಕುಗೊಂಡಿದ್ದಾರೆ.
ಇದನ್ನೂ ಓದಿ ಮೂಡಬಿದ್ರೆ ಇನ್ಸ್ ಪೆಕ್ಟರ್ ಕಾಮಕಾಂಡ ಪ್ರಕರಣ: ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಿದ್ರಾ ಸಂದೇಶ?
ಮೊಸಳೆ ದಾಳಿಗೆ ಮೀನುಗಾರ ಬಲಿ
ಯಾದಗಿರಿ ಜಿಲ್ಲೆಯ ಜೋಳದಡಗಿ ಗ್ರಾಮದ ಬಳಿ ಭೀಮಾ ನದಿಯಲ್ಲಿ ಮೀನುಗಾರ ನಾಗರಾಜ್ (28) ದುರ್ಮರಣಕ್ಕೀಡಾದ ಘಟನೆ ನಡೆದಿದೆ. ನಸುಕಿನ ಜಾವ ಮೀನು ಹಿಡಿಯಲು ತೆರಳಿದ್ದ ನಾಗರಾಜ್, ಬೆಂಡ್ ಮೇಲೆ ಕುಳಿತು ಬಲೆ ಹಾಕುತ್ತಿದ್ದಾಗ ಬೃಹತ್ ಮೊಸಳೆ ದಾಳಿ ಮಾಡಲು ಮುಂದಾಗಿದೆ. ನದಿಗೆ ಬಿದ್ದ ಈಜಾಡಿ ಪಾರಾಗಲು ಯತ್ನಿಸಿದರೂ ಕಾಲಿಗೆ ಮೀನಿನ ಬಲೆ ಸಿಲುಕಿ ಹೊರಬರಲು ಸಾಧ್ಯವಾಗಲಿಲ್ಲ. ಸ್ಥಳೀಯ ಮೀನುಗಾರರು ಕೂಗಿದ ಪರಿಣಾಮ ಮೊಸಳೆ ಪರಾರಿ, ಬಳಿಕ ಮೃತದೇಹವನ್ನು ಹೊರತೆಗೆಯಲಾಗಿದೆ. ವಡಗೇರಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.