
ಕೊಪ್ಪಳ, ಮಾರ್ಚ್ 23: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸಂಗಟಿ
ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದರು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದರು ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇದನ್ನೂ ಓದಿ ಡಿಕೆ ಶಿವಕುಮಾರ್ ಸಿಎಂ ಮಾಡಿ ಎಂದ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ 1 ರೂ ನೀಡಿಲ್ಲ: ಪ್ರಣವಾನಂದಶ್ರೀ
ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ ನಿವಾಸಿ ಕರಿಯಣ್ಣ ಸಂಗಟಿ ಅವರ ನಿಧನಕ್ಕೆ ರಾಜಕೀಯ ವಲಯದಲ್ಲಿ ಶೋಕ ವ್ಯಕ್ತವಾಗಿದೆ. ಅವರ ಅಗಲಿಕೆಯಿಂದ ಜಿಲ್ಲೆಯಲ್ಲಿ ಅಪಾರ ನಷ್ಟ ಉಂಟಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.