
ಬೆಂಗಳೂರು, ಮಾರ್ಚ್ 25: ಕರ್ನಾಟಕ ವಿಧಾನಸಭೆಯ ಬಜೆಟ್ 2026 ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ನಡೆಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆ ಹಿಡಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ