Headlines

ಶಾಲೆಯಿಂದ ಬರುತ್ತಿದ್ದ ಅಕ್ಕ-ತಂಗಿ ಮೇಲೆ ಹರಿದ ಕಾರು; 11 ವರ್ಷದ ಬಾಲಕಿ ಸಾವು, ಮತ್ತೊಬ್ಬಳ ಸ್ಥಿತಿ ಗಂಭೀರ! | Belagavi Raybag Road Accident School Girls Hit By Car One Dead One Critical Sat

ಶಾಲೆಯಿಂದ ಬರುತ್ತಿದ್ದ ಅಕ್ಕ-ತಂಗಿ ಮೇಲೆ ಹರಿದ ಕಾರು; 11 ವರ್ಷದ ಬಾಲಕಿ ಸಾವು, ಮತ್ತೊಬ್ಬಳ ಸ್ಥಿತಿ ಗಂಭೀರ! | Belagavi Raybag Road Accident School Girls Hit By Car One Dead One Critical Sat



ಶಾಲೆಯಿಂದ ಬರುತ್ತಿದ್ದ ಅಕ್ಕ-ತಂಗಿ ಮೇಲೆ ಹರಿದ ಕಾರು; 11 ವರ್ಷದ ಬಾಲಕಿ ಸಾವು, ಮತ್ತೊಬ್ಬಳ ಸ್ಥಿತಿ ಗಂಭೀರ! | Belagavi Raybag Road Accident School Girls Hit By Car One Dead One Critical Sat

ಬೆಳಗಾವಿಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದಲ್ಲಿ ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಸಹೋದರಿಯರ ಮೇಲೆ ವೇಗವಾಗಿ ಬಂದ ಕಾರು ಹರಿದಿದೆ. ಈ ದುರ್ಘಟನೆಯಲ್ಲಿ ಓರ್ವ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬೆಳಗಾವಿ (ಮಾ.25): ಶಾಲೆ ಮುಗಿಸಿ ಕೈಕೈ ಹಿಡಿದು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಇಬ್ಬರು ಪುಟ್ಟ ಸಹೋದರಿಯರ ಮೇಲೆ ಅತಿವೇಗವಾಗಿ ಬಂದ ಕಾರೊಂದು ಹರಿದ ಪರಿಣಾಮ, ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬಳ ಸ್ಥಿತಿ ಚಿಂತಾಜನಕವಾಗಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಘಟನೆಯ ವಿವರ:

ಮೃತ ದುರ್ದೈವಿ ಬಾಲಕಿಯನ್ನು ಜಯಶ್ರೀ ಕೋಟರೆ (11) ಎಂದು ಗುರುತಿಸಲಾಗಿದೆ. ಈಕೆಯ ಸಹೋದರಿ ಭಾಗ್ಯಶ್ರೀ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಇಬ್ಬರೂ ಸಹೋದರಿಯರು ಮೇಖಳಿ ಗ್ರಾಮದ ಅನುದಾನಿತ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಪ್ರತಿದಿನದಂತೆ ಇಂದು ಕೂಡ ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಾಲನ ರೂಪದಲ್ಲಿ ಬಂದ ಕಾರು ಇವರ ಬದುಕನ್ನೇ ಕಿತ್ತುಕೊಂಡಿದೆ.

ಅಪಘಾತ ಸಂಭವಿಸಿದ್ದು ಹೇಗೆ?:

ನಾಗರಮುನ್ನೋಳಿ ಗ್ರಾಮದಿಂದ ರಾಯಬಾಗ ಪಟ್ಟಣದ ಕಡೆಗೆ ಅತಿವೇಗವಾಗಿ ತೆರಳುತ್ತಿದ್ದ ಕಾರು, ಮೇಖಳಿ ಗ್ರಾಮದ ಹೊರವಲಯದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಯಶ್ರೀ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಭಾಗ್ಯಶ್ರೀಯನ್ನು ತಕ್ಷಣವೇ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಆಕೆಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸ್ ಭೇಟಿ ಮತ್ತು ತನಿಖೆ:

ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ ಹಾಗೂ ರಾಯಬಾಗ ಸಿಪಿಐ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮೇಖಳಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ರಾಯಬಾಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ವಶಕ್ಕೆ ಪಡೆಯಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಸ್ತೆಗಳಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.



Source link

Leave a Reply

Your email address will not be published. Required fields are marked *