Headlines

ಮೈಸೂರಿನಲ್ಲಿ ಬ್ಲ್ಯಾಕ್ ಮೇಲ್ ಸಮಾವೇಶ: ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿ

ಮೈಸೂರಿನಲ್ಲಿ ಬ್ಲ್ಯಾಕ್ ಮೇಲ್ ಸಮಾವೇಶ: ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿ




<p>ಇದು ಸಾಧನಾ ಸಮಾವೇಶ ಅಲ್ಲ. ಕಾಂಗ್ರೆಸ್ ಹೈಕಮಾಂಡ್‌ಗೆ ಮಾಡುತ್ತಿರುವ ಬ್ಲ್ಯಾಕ್ ಮೇಲ್ ಸಮಾವೇಶ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.</p><img><p><strong>ಮೈಸೂರು (ಜು.19): </strong>ಇದು ಸಾಧನಾ ಸಮಾವೇಶ ಅಲ್ಲ. ಕಾಂಗ್ರೆಸ್ ಹೈಕಮಾಂಡ್‌ಗೆ ಮಾಡುತ್ತಿರುವ ಬ್ಲ್ಯಾಕ್ ಮೇಲ್ ಸಮಾವೇಶ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.</p><img><p>4ನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಂದರೆ ಸಮಾವೇಶ, ಸಮಾವೇಶ ಅಂದರೆ ಸಿದ್ದರಾಮಯ್ಯ. ಸಿಎಂ ಸ್ಥಾನ ಅಲ್ಲಾಡುವ ವೇಳೆಯಲ್ಲಿ ಈ ರೀತಿಯ ಸಮಾವೇಶ ಮಾಡಿ ಕಾಂಗ್ರೆಸ್ ಹೈಕಮಾಂಡ್‌ಗೆ ಬೆದರಿಸುವ ತಂತ್ರ ಸಿದ್ದರಾಮಯ್ಯಗೆ ಸಿದ್ಧಿಸಿದೆ ಎಂದು ಆರೋಪಿಸಿದರು.</p><img><p>ಸಿಎಂಗೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಭೇಟಿಗೆ ಸಮಯವೇ ಸಿಕ್ಕಿಲ್ಲ. ರಾಹುಲ್ ಗಾಂಧಿ ಸಮಯ ಕೂಡ ಕೊಟ್ಟಿಲ್ಲ. ಹೀಗಾಗಿ, ಕಾಂಗ್ರೆಸ್‌ಗೆ ಸವಾಲು ಹಾಕಲು ಸಾಧನಾ ಸಮಾವೇಶ ಮಾಡ್ತಿದ್ದಾರೆ. ಇದು ಸಾಧನಾ ಸಮಾವೇಶ ಅಲ್ಲ. ಕಾಂಗ್ರೆಸ್ ಹೈಕಮಾಂಡ್‌ಗೆ ಮಾಡುತ್ತಿರುವ ಬ್ಲ್ಯಾಕ್ ಮೇಲ್ ಸಮಾವೇಶ ಎಂದರು.</p><img><p>ರಾಜ್ಯಕ್ಕಾಗಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂದು ಸಮಾವೇಶ ಮಾಡುತ್ತಿದ್ದಾರೆ? ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಮಯ ಬಂದಿದೆ. ಹೀಗಾಗಿ ಹೈಕಮಾಂಡ್ ಬೆದರಿಸಲು ಸಿಎಂ ಸಮಾವೇಶ ಮಾಡುತ್ತಿದ್ದಾರೆ.</p><img><p>ಮುಡಾ ಹಗರಣದ ವೇಳೆಯೂ ಮೈಸೂರಿನಲ್ಲಿ ಸಮಾವೇಶ ಮಾಡಿದರು. ತಮ್ಮ ಕುರ್ಚಿಗೆ ಸಂಕಷ್ಟ ಬಂದಾಗ ಅಹಿಂದ ಸಮುದಾಯ ನೆನಪಾಗುತ್ತದೆ. ಅಹಿಂದ ಸಮುದಾಯ ಇವರ ಮತ ಬ್ಯಾಂಕ್ ಮಾತ್ರ ಎಂದು ಟೀಕಿಸಿದರು.</p><img><p><strong>ಆರ್‌ಸಿಬಿ ತಂಡ ಬಲಿಪಶು: </strong>ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಕುನ್ಹಾ ವರದಿ ಅರೆಬೆಂದಿದೆ. ಸಿಎಂ- ಡಿಸಿಎಂ ಪೈಪೋಟಿಗೆ 11 ಜನ ಬಲಿಯಾದರು.‌ ಈ ತಪ್ಪು ಮುಚ್ಚಿಕೊಳ್ಳಲು ಆರ್‌ಸಿಬಿ ತಂಡವನ್ನು ಬಲಿಪಶು ಮಾಡಿದ್ದಾರೆ. ಈ ವರದಿ ಸಮರ್ಪಕ ಮತ್ತು ನ್ಯಾಯಯುತವಾಗಿಲ್ಲ. ಸಿಎಂಗೆ ಪ್ರಾಮಾಣಿಕತೆ ಇದ್ದಿದ್ದರೇ ಇಂತಹ ವರದಿಯನ್ನು ನ್ಯಾಯಾಲಯದ ಮುಂದೆ ಇಡುತ್ತಿರಲಿಲ್ಲ ಎಂದರು.</p>



Source link

Leave a Reply

Your email address will not be published. Required fields are marked *