
ದಾವಣಗೆರೆ, ಮಾರ್ಚ್ 27: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಸಿಗದೇ ಇರುವುದು ಸಮಾಜದ ಕಾರ್ಯಕರ್ತರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಕಣಕ್ಕೆ ಇಳಿಯುವಾಗ ಈ ಹಿಂದೆ ಸಾದಿಕ್ ಪೈಲ್ವಾನ್ ಘೋಷಿಸಿದ್ದ ಕಾರಣ ಅವರಿಗೆ ಸಮುದಾಯದ ಬೆಂಬಲವಿದೆ. ಆದರೀಗ ಆ ನಿರ್ಧಾರದಿಂದ ಅವರು ಹಿಂದೆ ಸರಿಯುತ್ತಿರುವ ಹಿನ್ನೆಲೆ, ಅವರಿಗೆ ಬೆಂಬಲ ನೀಡಿದ ನಾಯಕರು ಯಾರೂ ಕಾರಣಕ್ಕೂ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ಹೇಳುತ್ತಿರುವುದು ಕಾಂಗ್ರೆಸ್ಗೆ ಹೊಸ ತಲೆನೋವಾಗುವ ಸಾಧ್ಯತೆ ಇದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.