ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ: ವಿಶ್ವಕಪ್ ಗೆಲುವಿನ ಬೆನ್ನಲ್ಲೇ ವಾಂಖೆಡೆ ಗ್ರೌಂಡ್ಸ್‌ಮೆನ್‌ಗಳಿಗೆ ಉಡುಗೊರೆ | Hardik Pandya Rewards Wankhede Groundsmen After T20 World Cup 2026 Win San

ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ: ವಿಶ್ವಕಪ್ ಗೆಲುವಿನ ಬೆನ್ನಲ್ಲೇ ವಾಂಖೆಡೆ ಗ್ರೌಂಡ್ಸ್‌ಮೆನ್‌ಗಳಿಗೆ ಉಡುಗೊರೆ | Hardik Pandya Rewards Wankhede Groundsmen After T20 World Cup 2026 Win San



ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ: ವಿಶ್ವಕಪ್ ಗೆಲುವಿನ ಬೆನ್ನಲ್ಲೇ ವಾಂಖೆಡೆ ಗ್ರೌಂಡ್ಸ್‌ಮೆನ್‌ಗಳಿಗೆ ಉಡುಗೊರೆ | Hardik Pandya Rewards Wankhede Groundsmen After T20 World Cup 2026 Win San

ಟಿ20 ವಿಶ್ವಕಪ್‌ಗೂ ಮುನ್ನ ವಾಂಖೆಡೆ ಸಿಬ್ಬಂದಿಗೆ ನೀಡಿದ್ದ ಭರವಸೆಯನ್ನು ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈಡೇರಿಸಿದ್ದಾರೆ. ಕಠಿಣ ಅಭ್ಯಾಸಕ್ಕೆ ಸಹಕರಿಸಿದ ಸಿಬ್ಬಂದಿಯನ್ನು ಸನ್ಮಾನಿಸಿ, ಆರ್ಥಿಕ ನೆರವು ನೀಡುವ ಮೂಲಕ ತಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ. 

ಮುಂಬೈ (ಮಾ.27): ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಮೈದಾನದ ಹೊರಗೂ ತಾವು ‘ರಿಯಲ್ ಹೀರೋ’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದ ಮೈದಾನದ ಸಿಬ್ಬಂದಿಗೆ ತಿಂಗಳುಗಳ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ ಹಾರ್ದಿಕ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ವಾಂಖೆಡೆ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸಿದ್ದರು. ಮುಂಬೈ ಇಂಡಿಯನ್ಸ್ ನಾಯಕರಾಗಿರುವ ಇವರು ಹಲವು ರಾತ್ರಿಗಳ ಕಾಲ ತಡರಾತ್ರಿಯವರೆಗೂ ಬೆವರು ಹರಿಸಿದ್ದರು. ಈ ಸಮಯದಲ್ಲಿ ಮೈದಾನದ ಸಿಬ್ಬಂದಿ ಅವರಿಗೆ ಯಾವುದೇ ಅಡೆತಡೆಯಿಲ್ಲದಂತೆ ಅಭ್ಯಾಸಕ್ಕೆ ಬೇಕಾದ ಸಕಲ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದರು. ಈ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹಾರ್ದಿಕ್ ಅಂದು ವಾಗ್ದಾನ ಮಾಡಿದ್ದರು.

ಅದರಂತೆ ಗುರುವಾರ ವಾಂಖೆಡೆಗೆ ಭೇಟಿ ನೀಡಿದ ಹಾರ್ದಿಕ್, ಮೈದಾನದ ಸಿಬ್ಬಂದಿಯನ್ನು ಸನ್ಮಾನಿಸಿ, ಅವರಿಗೆ ವಿಶೇಷ ಉಡುಗೊರೆಗಳು ಮತ್ತು ಆರ್ಥಿಕ ನೆರವು ನೀಡುವ ಮೂಲಕ ತಮ್ಮ ಕೃತಜ್ಞತೆ ಅರ್ಪಿಸಿದರು.

ಬ್ಯಾಕ್ ಟು ಬ್ಯಾಕ್ ಚಾಂಪಿಯನ್

ಹಾರ್ದಿಕ್ ಪಾಂಡ್ಯ ಮತ್ತು ಸಿಬ್ಬಂದಿಯ ಶ್ರಮಕ್ಕೆ ಅದ್ಭುತ ಫಲಿತಾಂಶ ಸಿಕ್ಕಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿದ ಭಾರತ, ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ. ಇಡೀ ಟೂರ್ನಿಯಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಹಾರ್ದಿಕ್ ಪ್ರಮುಖ ಪಾತ್ರ ವಹಿಸಿದ್ದರು. ಈ ಮೂಲಕ ಅವರು 2024 ಮತ್ತು 2026ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿ ‘ಟೂ-ಟೈಮ್ ಚಾಂಪಿಯನ್’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಾರ್ದಿಕ್ ಪಾಂಡ್ಯ ಕೇವಲ ಮೈದಾನದ ಸಿಬ್ಬಂದಿ ಮಾತ್ರವಲ್ಲದೆ, ಸಹ ಆಟಗಾರರ ಕಷ್ಟಕ್ಕೂ ಸ್ಪಂದಿಸುತ್ತಾರೆ. ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಅವರ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ, ಹಾರ್ದಿಕ್ ಅವರ ಮಾನವೀಯ ಗುಣವನ್ನು ಸ್ಮರಿಸಿದ್ದಾರೆ. “ವಿಶ್ವಕಪ್ ತಂಡಕ್ಕೆ ನನ್ನನ್ನು ಆಯ್ಕೆ ಮಾಡದಿದ್ದಾಗ ನನಗೆ ಮೊದಲು ಮೆಸೇಜ್ ಮಾಡಿದ್ದೇ ಹಾರ್ದಿಕ್ ಭಾಯ್. ಒಬ್ಬ ವ್ಯಕ್ತಿಯಾಗಿ ಮತ್ತು ಕ್ರಿಕೆಟಿಗನಾಗಿ ಬೆಳೆಯುತ್ತಾ ಇರು ಎಂದು ಅವರು ನನಗೆ ಧೈರ್ಯ ತುಂಬಿದ್ದರು,” ಎಂದು ಜಿತೇಶ್ ಹೇಳಿದ್ದಾರೆ. ಅಲ್ಲದೆ, ಹಾರ್ದಿಕ್ ಅವರು ಕೇಳದೆಯೇ ಸಣ್ಣ ಪುಟ್ಟ ಮಕ್ಕಳಿಗೆ ಕ್ರಿಕೆಟ್ ಬ್ಯಾಟ್‌ಗಳನ್ನು ಉಡುಗೊರೆಯಾಗಿ ನೀಡುತ್ತಾರೆ ಎಂದು ಅವರ ಉದಾರತೆಯನ್ನು ಶ್ಲಾಘಿಸಿದ್ದಾರೆ.



Source link

Leave a Reply

Your email address will not be published. Required fields are marked *