Headlines

ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್​​ ವರಿಷ್ಠಾಧಿಕಾರಿ ಹೇಳಿದ್ದೇನು?

ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್​​ ವರಿಷ್ಠಾಧಿಕಾರಿ ಹೇಳಿದ್ದೇನು?


ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಆನೇಕಲ್, ಮಾರ್ಚ್ 29: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಳೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ತಾಯಿ ಮತ್ತು ಅಕ್ಕನ ಹತ್ಯೆಗೈದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೋಹನ್ ಗೌಡ ದೊಡ್ಡ ಮಟ್ಟದಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದರು. 10 ಲಕ್ಷ, 50 ಲಕ್ಷ, ಒಂದು ಕೋಟಿ ರೂಪಾಯಿಗಳಿಗೆ ಚಿಟ್ ಫಂಡ್‌ಗಳನ್ನು ನಡೆಸದೆ, ಹಬ್ಬಗಳಿಗಾಗಿ ಮಟನ್, ಪಟಾಕಿ, ಯುಗಾದಿ ಹಬ್ಬ ಸೇರಿದಂತೆ ಸಾಕಷ್ಟು ಚಿಟ್‌ಗಳನ್ನು ನಡೆಸಲಾಗಿದೆ. ಈ ವ್ಯವಹಾರಗಳಲ್ಲಿ ಭಾರಿ ನಷ್ಟ ಅನುಭವಿಸಿದರು, ಸಾಲಗಾರರ ಕಾಟ ವಿಪರೀತವಾಗಿತ್ತು. ಈ ದುರಂತಕ್ಕೆ ಇದೇ ಮೂಲ ಕಾರಣ ಎಂದು ಮೇಲ್ನೋಟಕ್ಕೆ ಸಂಭವಿಸಿದೆ ಎಂದು ತೀರ್ಮಾನಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *