
ಮೈಸೂರು, ಮಾರ್ಚ್ 30: ಜಿಲ್ಲೆಯ ಸರಗೂರು ತಾಲ್ಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು ಜೀಪ್ ಮೇಲೆಯೇ ದಾಳಿ ನಡೆಸಿದ್ದು, ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಜೀಪ್ ಚಾಲಕ ಪ್ರಾಣಾಪಾಯದಿಂದ ಪಾ ಆಗಿದ್ದಾರೆ. ಬಳಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಮತ್ತೆ ಕಾಡಿಗೆ ಹಿಂತಿರುಗಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.