ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?


ದಾವಣಗರೆ ದಕ್ಷಿಣ ಬೈ ಎಲೆಕ್ಷನ್ ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ದಾವಣಗೆರೆ/ಬಾಗಲಕೋಟೆ, (ಮಾರ್ಚ್ 31): ದಾವಣಗೆರೆ ದಕ್ಷಿಣ ಕ್ಷೇತ್ರದಿಂದ (ದಾವಣಗೆರೆ ದಕ್ಷಿಣ ಉಪಚುನಾವಣೆ) ಮುಸ್ಲಿಂ ಮುಖಂಡ ಸಾದಿಕ್ ಪೈಲ್ವಾನ್ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮ್ಮದ್ ಖಾನ್ (ಜಮೀರ್ ಅಹಮದ್ ಖಾನ್)ಬಿಗಿಪಟ್ಟು ಹಿಡಿದಿದ್ದರು. ಈ ಸಂಬಂಧ ಸಚಿವ ಎಸ್ ಎಸ್ ಎಸ್ ಮಲ್ಲಿಕಾರ್ಜುನ ಆಕ್ಷೇಪ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಜಮೀರ್ ಅಹಮ್ಮದ್ ಖಾನ್ ಗೆ ಏಕವಚನದಲ್ಲಿ ನಿಂದಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪದಿಂದ ಜಮೀರ್ ಅಸಮಾಧಾನಗೊಂಡಿದ್ದು, ಚುನಾವಣಾ ಪ್ರಚಾರದಿಂದ ದೂರಿದ್ದಾರೆ. ಇನ್ನೊಂದೆಡೆ ಅವರ ಅಭಿಮಾನಿಗಳು ಹಾಗೂ ಮುಸ್ಲಿಂ ಸಮಯದಾಯದವರು ಪ್ರಚಾರಕ್ಕೆ ಜಮೀರ್ ಅಹಮ್ಮದ್ ಖಾನ್ ಅವರನ್ನು ಕರೆಯಿಸಿ ಎಂದು ಕರೆದಿದ್ದಾರೆ.

ಮಲ್ಲಿಕಾರ್ಜುನ-ಜಮೀರ್ ನಡುವೆ ತಿಕ್ಕಾಟ

ಉಪಚುನಾವಣೆ ಘೋಷಣೆಯಾದಾಗಿನಿಂದ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ವಸತಿ ಮತ್ತು ವಕ್ಸ್ ಸಚಿವ ಜಮೀರ್ ಅಹ್ಮದ್ ನಡುವಿನ ತಿಕ್ಕಾಟ ಮುಂದುವರೆದಿದ್ದು, ‘ಸ್ವಾಭಿಮಾನ’ ಮಾತುಗಳನ್ನು ಉಭಯ ನಾಯಕರು ಆಡಿದ್ದಾರೆ. ಪುತ್ರ ಸಮರ್ಥ್‌ಗೆ ಟಿಕೆಟ್ ನೀಡಬೇಕೆಂದು ಸಚಿವ ಮಲ್ಲಿಕಾರ್ಜುನ ಹಾಗೂ ಸಾದಿಕ್ ಪೈಲ್ವಾನ್‌ಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಅಂತಿಮವಾಗಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೊಡಲು ಹೈಕಮಾಂಡ್ ತೀರ್ಮಾನಿಸಿದರೂ ಜಮೀರ್ ಇದನ್ನು ವಿರೋಧಿಸುತ್ತಲೇ ಬಂದಿದ್ದರು. ಸಾದಿಕ್ ಬಂಡಾಯವಾಗಲು ಜಮೀರ್ ಕಾರಣ ಎಂಬ ಮಾತುಗಳು ಕೇಳಿಬಂದಿತ್ತು. ಈ ಎಲ್ಲ ಗೊಂದಲಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಧ್ಯಸ್ಥಿಕೆಯಲ್ಲಿ ಜಮೀರ್ ಸಮರ್ಥ್ ಪರವಾಗಿ ಪ್ರಚಾರ ಕೈಗೊಳ್ಳಲು ಮುಂದಾಗಿದ್ದರು. ಬೂದಿ ಮುಚ್ಚಿದ ಕೆಂಡದಂತಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯಕ್ಕೆ ಸಚಿವ ಮಲ್ಲಿಕಾರ್ಜುನ್ ಅವರ ‘ಜಮೀರ್ ಬರ ಬಾರದಿರುವುದೇ ಒಳ್ಳೆಯದು’ ಎಂಬ ಹೇಳಿಕೆ ಮತ್ತೆ ಕಿಡಿ ಕಾರಿದೆ.

ಇದನ್ನೂ ಓದಿ: ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ಆಪರೇಷನ್ ಮುಸ್ಲಿಂ ಕ್ಯಾಂಡಿಡೇಟ್ ಕಾರ್ಯಾಚರಣೆ ಫೇಲ್

ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡ ಜಮೀರ್

ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ (ಸುಮಾರರು 80 ಸಾವಿರ) ದಾವಣಗೆರೆ ಕ್ಷೇತ್ರದಲ್ಲಿ ಮುಸ್ಲೀಮರಿಗೆ ಟಿಕೆಟ್ ಕೊಡಿಸಲು ಸಚಿವ ಜಮೀರ್ ಇನ್ನಿಲ್ಲದಂತೆ ಸರ್ಕಸ್ ಮಾಡಿದ್ದರು. ಮುಸ್ಲಿಂ ಮುಖಂಡ ಸಾದಿಕ್‌ಗೆ ಟಿಕೆಟ್ ಕೊಡಿ. ಗೆಲ್ಲಿಸಿಕೊಂಡು ಬರುತ್ತೇನೆಂದು ಜಮೀರ್ ಸುರ್ಜೇವಾಲ ಸಭೆಯಲ್ಲೂ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಶಾಮನೂರು ಮೊಮ್ಮಗ ಸಮರ್ಥ್‌ಗೆ ಟಿಕೆಟ್ ಕೊಟ್ಟಿದೆ. ಇನ್ನೊಂದೆಡೆ ಎಸ್ ಎಸ್ ಎಸ್ ಮಲ್ಲಿಕಾರ್ಜುನ ಆಡಿದ ಮಾತುಗಳಿಂದ ಸಹ ಸಿಎಂ ಸಿದ್ದರಾಮಯ್ಯ ಆಪ್ತ, ಸಚಿವ ಜಮೀರ್ ಮುನಿಸಿಕೊಂಡಿದ್ದು, ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಸಹ ಪ್ರಚಾರದಿಂದ ದೂರ ಉಳಿದಿದ್ದಾರೆ. ಕೇರಳ ಚುನಾವಣೆಗೆ ಪ್ರಚಾರ ಮಾಡಲು ಅಲ್ಲೆ ಠಿಕಾಣಿ ಹೂಡಿರುವ ಜಮೀರ್ ಅಹ್ಮದ್, ದಾವಣಗೆರೆ ದಕ್ಷಿಣ ಕ್ಷೇತ್ರದ ಮುಖ ನೋಡುತ್ತಿಲ್ಲ.

ಜಮೀರ್ ಗೆ ಫುಲ್ ಡಿಮ್ಯಾಂಡ್

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ತಾತ್ಕಾಲಿಕ ಹಾಗೂ ಕಾರ್ಯಕ್ರಮಗಳ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕಳುಹಿಸುವಂತೆ ನಾಯಕರಿಗೆ ಬಿಗಿ ಹಿಡಿದಿದ್ದಾರೆ. ನಿನ್ನೆ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಸಹ ಮುಸ್ಲಿಮರು, ಜಮೀರ್ ಅವರನ್ನ ಪ್ರಚಾರಕ್ಕೆ ಕಳುಹಿಸಿದ್ದಾರೆ.

ಇನ್ನೊಂದೆಡೆ ಇಂದು (ಮಾರ್ಚ್ 31) ದಾವಣಗೆರೆಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಸಹ ಜಮೀರ್ ಒಬ್ಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪೋಟೋ ಹಿಡಿದ ಅಭಿಮಾನಿಗಳು ಆಗಮಿಸಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಎದರು ಜಮೀರ್ ಅಹಮ್ಮದ್ ಖಾನ್ ಪೋಟೋ ಹಿಡಿದು ಘೋಷಣೆ ಕೂಗಿದ್ದಾರೆ. ಚುನಾವಣೆ ಪ್ರಚಾರಕ್ಕೆ ಜಮೀರ್ ಅವರನ್ನು ಕರೆಯಬೇಕು. ಅವರು ಬರದಿದ್ದರೆ ನಾವು ಬರಲ್ಲ. ಜಮೀದ್ ಅಹಮ್ಮದ್ ಖಾನ್ ಬಂದರೆ ಕಾಂಗ್ರೆಸ್ ಗೆಲ್ಲುತ್ತೆ. ಇಲ್ಲವಾದರೆ ಕಾಂಗ್ರೆಸ್ ಗೆಲುವು ಕಷ್ಟ ಎಂದು ಜಮೀರ್ ಅಭಿಮಾನಿ ಆಸೀಫ್ ಅಲಿ ಬಿಗಿಪಟ್ಟು ಹಿಡಿದಿದ್ದು, ಕೊನೆಗೆ ಮೊಹಮ್ಮದ್ ನಲಪಾಡ್ ಆಸೀಫ್ ಅಲಿಯನ್ನು ಪಕ್ಕಕ್ಕೆ ಕರೆದೊಯ್ದು ಸಮಾಧಾನಪಡಿಸಿದ್ದಾರೆ.

ಒಬ್ಬರಿಂದ ಪಕ್ಷ ನಡೆಯಲ್ಲ ಎಂದ ಡಿಕೆಶಿ

ಇನ್ನು ದಾವಣಗೆರೆಯಲ್ಲಿ ಮಾತನಾಡಿದ ಡಿಕೆಶಿ, ಶೇ. 79ರಷ್ಟು ಜನ ಕಾಂಗ್ರೆಸ್ ಅಭ್ಯರ್ಥಿ ಪರ ಒಲವು. ಶಾಮನೂರು ಶಿಕ್ಷಣ ಸಂಸ್ಥೆಯಲ್ಲಿ ಜನ ಶಿಕ್ಷಣ ಪಡೆದಿದ್ದಾರೆ. ಸಚಿವ ಜಮೀರ್ ಕೇರಳದಲ್ಲಿ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡ್ತಿದ್ದಾರೆ.ಮುಗಿಸಿಕೊಂಡು ಬಂದ ಮೇಲೆ ಎಲ್ಲಿಗೆ ಕಳುಹಿಸಬೇಕು ಎಂದು ಚರ್ಚಿಸುತ್ತೇವೆ. ಒಬ್ಬರಿಂದ ಪಕ್ಷ ನಡೆಯಲ್ಲ. ಅದು ಡಿಕೆ, ಸಿಎಂ, ಜಮೀರ್ ಆಗಬಹುದು. 16 ನಿಗಮ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅಧ್ಯಕ್ಷ ಸ್ಥಾನ ನೀಡಿದ್ದೇವೆ. ಅಬ್ದುಲ್ ಜಬ್ಬಾರ್‌ಗೆ 3 ಬಾರಿ ಪರಿಷತ್ ಸದಸ್ಯ ಸ್ಥಾನ ನೀಡಿದ್ದೇವೆ. ಕಣದಲ್ಲಿ ಮುಸ್ಲಿಂ ಅಭ್ಯರ್ಥಿಗಳು ಇದ್ದಾರೆ. ಅದರಿಂದ ತೊಂದರೆ ಆಗಲ್ಲ ಎಂದರು. ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಹೇಳುವ ಮೂಲಕ ಜಮೀರ್ ಅಹಮ್ಮದ್ ಖಾನ್ ಗೆ ಪರೋಕ್ಷ ಟಾಂಗ್ ಕೊಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *