
ತುಮಕೂರು, ಏಪ್ರಿಲ್ 01: ನಡೆದಾಡುವ ದೇವರು ಎಂದು ಪ್ರಸಿದ್ಧರಾದ ಸಿದ್ದಗಂಗಾ ಮಠ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವವನ್ನು ಇಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಖ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ಗದ್ದುಗೆಯನ್ನು ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳಗಿನ ಜಾವ 5 ಗಂಟೆಯಿಂದಲೇ ಭಕ್ತಾದಿಗಳು ಆಗಮಿಸಿ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಮಠದ ಸಹ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಕಾರ್ಯಕ್ರಮವನ್ನು ಒಂದೂವರೆ ಗಂಟೆಗೆ ಸೀಮಿತಗೊಳಿಸಲಾಗಿದೆ. ರಾಜ್ಯಪಾಲರು ಸೇರಿದಂತೆ ಹಲವು ಗಣ್ಯರು ಸಹ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.