
ತುಮಕೂರು, ಏಪ್ರಿಲ್ 01: ಭೀಕರ ಅಪಘಾತಕ್ಕೆ ಕಾರೊಂದು ಹೊತ್ತಿಉರಿದಿದ್ದು, ಮೂವರು ಸಜೀವದಹನವಾಗಿರುವ (ಸಾವು) ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಕೊರಗೆರೆ ಸೇತುವೆ ಮೇಲೆ ನಡೆದಿದೆ. ಮೃತರು ಗುಬ್ಬಿ ತಾಲೂಕಿನವರು ಎನ್ನುತ್ತಿದ್ದಾರೆ. ಘಟನೆಯಲ್ಲಿ ಗಾಯನ ಸ್ಥಿತಿ ಗಂಭೀರವಾಗಿದ್ದು, ಸದ್ಯಾಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಯಾರಿನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಡೆದಿದ್ದೇನು?
ನಾಲ್ವರು ಇಂದು ಪಂಚಣಿಹಳ್ಳಿ ಹತ್ತಿರದ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆಯಲು ವಾಪಸ್ ಆಗಿದ್ದಾರೆ. ಈ ವೇಳೆ ವೇಗವಾಗಿ ಬಂದ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಮೂವರು ಸಜೀವದಹನವಾಗಿದ್ದು, ಸಂಪೂರ್ಣ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಕಸ್ಮಿಕ ಬೆಂಕಿ: ಕುರಿಗಾಹಿ ಸೇರಿ 45 ಕುರಿಗಳು ಸಜೀವದಹನ
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೊರಾಳ ಗ್ರಾಮದಲ್ಲಿ ತಡರಾತ್ರಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ಕುರಿಗಾಹಿ ಸೇರಿದಂತೆ ಸುಮಾರು 45 ಕುರಿಗಳು ಸಜೀವ ದಹನಗೊಂಡಿರುವಂತಹ ಘಟನೆ ನಡೆದಿದೆ. ಶಂಕರ ಮೇತ್ರ (65) ಮೃತ ವ್ಯಕ್ತಿ. ತನಿಖೆ ವಿದ್ಯುತ್ ಶಾರ್ಟ್ ಅಥವಾ ಬೇರೆ ಆಕಸ್ಮಿಕ ಕಾರಣದಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ತನ್ನದೇ ಟೆಂಪೋದಲ್ಲಿ ಶವವಾಗಿ ಪತ್ತೆಯಾದ ಮಾಲೀಕ: ಸಾವಿನ ಸುತ್ತ ಅನುಮಾನದ ಹುತ್ತ
ಇನ್ನು ಈ ಔರಾದ್ ಪೊಲೀಸ್ ಠಾಣೆ ಘಟನೆ ಸಂಭವಿಸಿದ್ದು, ಮಾಹಿತಿ ದೊರೆಯುತ್ತಿದ್ದಂತೆ ಬೀದರ್ ಎಸ್ಪಿ ಪ್ರದೀಪ್ ಗುಂಟೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆದಿದೆ. ಈ ಘಟನೆಯ ನಿಖರ ಕಾರಣ ಸ್ಪಷ್ಟವಾಗಿಲ್ಲ.
ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು
ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಬೈಕ್ ನಲ್ಲಿ ಪೊಲೀಸ್ ಠಾಣೆಗೆ ಹೊರಟ್ಟಿದ್ದ ಶ್ರೀನಿವಾಸ್(54) ಮೃತ ವ್ಯಕ್ತಿ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಜೀಪ್ ಚಾಲಕ. ಚಿಂತಾಮಣಿ ನಗರ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.