Headlines

ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯ ಹತ್ಯೆ: ಬೆಚ್ಚಿಬಿದ್ದ ಕಲಬುರಗಿ

ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯ ಹತ್ಯೆ: ಬೆಚ್ಚಿಬಿದ್ದ ಕಲಬುರಗಿ


ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯ ಹತ್ಯೆ: ಬೆಚ್ಚಿಬಿದ್ದ ಕಲಬುರಗಿ

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವರೊಬ್ಬರ ಸಂಬಂಧವನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (ಕಲಬುರಗಿ) ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಈ ಅನಿಲ್ ರಾಠೋಡ್, ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿ, ಪಿ ಆಯಂಡ್ ಟಿ ಕಾಲೋನಿಯ ವೆಂಕಟೇಶ್ವರ್ ಕಾಂಪ್ಲೆಕ್ಸ್‌ನಲ್ಲಿ ಫೈನಾನ್ಸ್ ಇಟ್ಟುಕೊಂಡಿದ್ದರು. ಮೇಲಾಗಿ ಮಾಜಿ ಸಚಿವ ರೇವು ನಾಯಕ್ ಬೆಳಮಗಿಯ ಸಂಬಂಧಿ. ಅದೇ, ನಿನ್ನೆ (ಏಪ್ರಿಲ್ 02) ರಾತ್ರಿ ತನ್ನ ಫೈನಾನ್ಸ್ ನಲ್ಲಿ ಕುಳಿತಿದ್ದಾಗ, ಆಟೋದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳ ಹಣಕಾಸಿನ ವಿಚಾರಕ್ಕೆ ಗಲಾಟೆ ಮಾಡಲಾಗಿದೆ. ಬಳಿಕ ಮೂವರೂ ಸೇರಿ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿ ಅನಿಲ್ ನನ್ನ ಬರ್ಬರವಾಗಿ ಕೊಚ್ಚಿ ಕೊಂಡು ಎಸ್ಕೇಪ್ ಆಗಿದ್ದಾರೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂದು ತಂದೆ ಆರೋಪಿಸಿದ್ದಾರೆ.

ಕಲಬುರಗಿಯ ಸಿದ್ದೇಶ್ವರ ಬಡವಾಣೆ ನಿವಾಸಿಯಾಗಿರೋ ಅನಿಲ್ ರಾಠೋಡ್, ಫೈನಾನ್ಸ್ ವ್ಯವಹಾರ ನಡೆಸಿಕೊಂಡು ಹೋಗುತ್ತಿದ್ದರು. ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ ಫೈನಾನ್ಸ್ ಕಚೇರಿಗೆ ಕಳೆದ ರಾತ್ರಿ ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು, ಕಚೇರಿಯಲ್ಲಿ ಕುಂತಿದ್ದ ಅನಿಲ್ ರಾಠೋಡ್ ಜೊತೆ ಜಗಳ ತೆಗೆದಿದ್ದಾರೆ. ಜಗಳ ವಿಕೋಪಕ್ಕೆ ಹೋಗಿದ್ದು, ಈ ವೇಳೆ ಮೂವರು ಮಾರಕಾಸ್ತ್ರಗಳಿಂದ ಅನಿಲ್ ರಾಠೋಡ್‌ರನ್ನ ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ

ಸಾಲ ಪಡೆದವರೇ ಕಂಡ್ರಾ?

ಈ ಹಣಕಾಸಿನ ವಿಚಾರಕ್ಕೆ ನಮ್ಮ ಮಗನ ಕೊಲೆ ಮಾಡಿರುವ ಅನುಮಾನ ಇದೆ. ಸಾಲ ಪಡೆದವರೇ ಕೊಲೆ ಮಾಡಿದ್ದಾರೆ ಎಂದು ಮೃತನ ಪಾತ್ರ ಹೇಳಿದ್ದಾರೆ. ಇನ್ನೂ ಅನಿಲ್‌ಗೆ ಜೀವ ಬೆದರಿಕೆ ಇತ್ತು. ಈ ಬಗ್ಗೆ ನಮ್ಮ ಬಳಿಯೂ ಸಹ ಆತ ಹೇಳಿದ್ದಾನೆ. ಆದರೆ ಈ ರೀತಿಯಾಗಿ ಕೊಲೆ ಮಾಡುತ್ತಾರೆ ಎಂದು ನಾವು ನೋಡಲಿಲ್ಲ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡುತ್ತಿರುವಂತೆಯೇ ಅನಿಲ್ ರಾಠೋಡ್ ಓಡಿಹೋಗಲು ಯತ್ನಿಸಿದ್ದಾರೆ, ಈ ವೇಳೆ ಫೈನಾನ್ಸ್ ಕಚೇರಿ ಬಾಗಿಲು ಮುಂದೆಯೇ ಕೊಚ್ಚಿ ಹಾಕಿದ್ದಾರೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ ಶರಣಪ್ಪ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಶ್ವಾನದಳ, ಚ್ಚುಬೆರಳು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕರ ಬಂಧನಕ್ಕೆ ನಗರ ಪೊಲೀಸ್ ಆಯುಕ್ತರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ರೇವುನಾಯಕ್ ಬೆಳಮಗಿ ಹೇಳಿದ್ದೇನು?

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿಂದೆ ಮಾಜಿ ಸಚಿವ ರೇವುನಾಯಕ್ ಬೆಳಮಗಿ, ಕೆಲವು ವರ್ಷಗಳ ಹಿಂದೆ ನಮ್ಮ ಸಂಬಂಧಿಯನ್ನ ಕಟ್ಟಡ ಮೇಲಿಂದ ತಳ್ಳಿ ಹತ್ಯೆ ಮಾಡಲಾಗಿದೆ. ಇದೀಗ ದುಷ್ಕರ್ಮಿಗಳು ಫೈನಾನ್ಸ್‌ಗೆ ನುಗ್ಗಿ ನಮ್ಮ ಅಳಿಯನನ್ನೇ ಹತ್ಯೆ ಮಾಡಿದ್ದು, ಕೂಡಲೇ ಪೊಲೀಸರು ಹಂತಕರನ್ನ ಬಂಧಿಸಿದ್ದಾರೆ. ಸದ್ಯ ಈ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಬಳಿಕವಷ್ಟೇ ಮಾಜಿ ಸಚಿವರ ಅಳಿಯನ ಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.

ಒಟ್ಟಿನಲ್ಲಿ ಕಲಬುರಗಿಯಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ಕೊಲೆಗಳಿಂದ ಸಾರ್ವಜನಿಕರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *