Headlines

ಮುಸ್ಲಿಮರನ್ನೆಲ್ಲಾ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಸಿದ್ದರಾಮಯ್ಯ ಹೀಗೆಂದಿದ್ಯಾಕೆ ನೋಡಿ!

ಮುಸ್ಲಿಮರನ್ನೆಲ್ಲಾ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಸಿದ್ದರಾಮಯ್ಯ ಹೀಗೆಂದಿದ್ಯಾಕೆ ನೋಡಿ!


ಮುಸ್ಲಿಮರನ್ನೆಲ್ಲಾ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಸಿದ್ದರಾಮಯ್ಯ ಹೀಗೆಂದ್ಯಾಕೆ ನೋಡಿ!

ಬಾಗಲಕೋಟೆ, ಏಪ್ರಿಲ್ 4: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷ ನಾಯಕರ ಹೇಳಿಕೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಸಭ್ಯ ಪದ ಬಳಸಿದ ಬಿಜೆಪಿ ನಾಯಕ ಪ್ರತಾಪ್ ಸಿಂಹಗೆ ಟಾಂಗ್ ಕೊಟ್ಟ ಅವರು, ಬಿಜೆಪಿ ಪರ ಪ್ರಚಾರದ ವೇಳೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳನ್ನು ಖಂಡಿಸಿದರು. ಕಾಂಗ್ರೆಸ್ ಸರ್ಕಾರ ಮತ್ತು ಐದು ಗ್ಯಾರಂಟಿಗಳು ಸಾಮಾಜಿಕ ಬದ್ಧತೆಯ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಕೇಳುವುದಾಗಿ ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ, ತಾವು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3000 ರೂ. ನೀಡುವುದಾಗಿ ಮತ್ತು ಕಲ್ಲು ತೂರಾಟ ನಡೆಸಿದರೆ ಅದನ್ನು ಅಕ್ರಮವಾಗಿ ಕಟ್ಟಿದ ಕಟ್ಟಡವನ್ನು ಬುಲ್ಡೋಜರ್ ಮೂಲಕ ಕೆಡವುವ ಹೇಳಿಕೆಯನ್ನು ಸಿದ್ದರಾಮಯ್ಯ ಖಂಡಿಸಿದರು. ಇಂತಹ ಹೇಳಿಕೆಗಳು ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾಗಿ ಮತ್ತು ರಾಜಕೀಯ ವ್ಯಕ್ತಿಗಳಿಗೆ ಅಸಮಂಜಸ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು. ಮುಸಲ್ಮಾನರು ಭಾರತದ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದು, ಅವರನ್ನು ದೇಶದಿಂದ ಹೊರಹಾಕಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ದ್ವೇಷದ ರಾಜಕಾರಣ ಸಹಿಸಲಾಗದು ಎಂದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *