
ಬೆಂಗಳೂರು, ಏಪ್ರಿಲ್ 06: ಹೆಣ್ಣು ಮಕ್ಕಳ ಜತೆ ಕೆಲ ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ನೀವು ಕೇಳುತ್ತೀರಿ. ಆದರೆ ಬೆಂಗಳೂರು (ಬೆಂಗಳೂರು) ನಗರವು ದೇಶದ ಅತ್ಯಂತ ಕಾಳಜಿಯುಳ್ಳ ಮತ್ತು ಜವಾಬ್ದಾರಿಯುತ ನಗರಗಳಲ್ಲಿ ಮತ್ತೆ ನೆನಪಿಸಿದೆ. ಇದಕ್ಕೆ ಕಾರಣವಾಗಿದ್ದು ಯುವತಿಯೂ ಹಂಚಿಕೊಂಡಿದ್ದಾರೆ ಈ ವಿಡಿಯೋ. ತಡರಾತ್ರಿ ಒಬ್ಬಂಟಿಯಾಗಿದ್ದರೆ ಈ ಯುವತಿಯ ಸುರಕ್ಷತೆಗಾಗಿ ಇಬ್ಬರು ಅಪರಿಚಿತರು ಬಂದಿದ್ದಾರೆ. ಅಪರಿಚಿತ ವ್ಯಕ್ತಿಗಳು ತೋರಿದ ಕಾಳಜಿ ಕಂಡು ಯುವತಿಯೂ ಫಿದಾ ಆಗಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Karnatakaportfolio ಹೆಸರಿನ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಐಶ್ವರ್ಯ ಕಲ್ಪಾರ್ಜುನ್ ಎಂಬ ಯುವತಿ ತಮಗಾದ ಅನುಭವ ಹೇಳಿಕೊಂಡಿರುವುದನ್ನು ಕಾಣಬಹುದು. ಈ ವಿಡಿಯೋದಲ್ಲಿ, ಐಶ್ವರ್ಯ ಅವರು ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಿಂದ ಕಾಡುಗೋಡಿಗೆ ಬಂದು ಇಳಿದಿದ್ದಾರೆ. ತಡರಾತ್ರಿ 3 ಗಂಟೆ ಆಗುತ್ತಿದೆ. ಆದರೆ ಅವರ ಮನೆಗೆ ಕಾಡುಗೋಡಿ ಬಸ್ ನಿಲ್ದಾಣದಿಂದ 3 ಕಿಲೋ ಮೀಟರ್ ದೂರದಲ್ಲಿದ್ದ ಕಾರಣ ಯಾವುದೇ ಟ್ಯಾಕ್ಸಿ ಅಥವಾ ಆಟೋಗಳು ಬರಲು ರೆಡಿ ಇರಲಿಲ್ಲ. ಟ್ಯಾಕ್ಸಿ ಬುಕ್ ಆಗ ಸೂಚಿಸಲಾಗಿದೆ. ಹೀಗಾಗಿ ಟ್ಯಾಕ್ಸಿಗಾಗಿ ಕಾಯುತ್ತಿದ್ದ ವೇಳೆ ಅಲ್ಲಿದ್ದ ಒಬ್ಬ ಬಸ್ ಕಂಡಕ್ಟರ್ ಅವರ ಸಹಾಯಕ್ಕೆ ಧಾವಿಸಿದ್ದಾರೆ. ನಿಮಗೆ ಟ್ಯಾಕ್ಸಿ ಸಿಗುವವರೆಗೂ ನಾನು ಜೊತೆಯಲ್ಲಿ ಇರುತ್ತೇನೆ ಎಂದು ಧೈರ್ಯ ತುಂಬಿದ್ದಾರೆ ಎಂದು ಹೇಳಲಾಗಿದೆ.
ವೈರಲ್ ವಿಡಿಯೋ ಇಲ್ಲಿದೆ
ಬೆಂಗಳೂರಿನ ಹೃದಯಸ್ಪರ್ಶಿ ಕ್ಷಣವು ನಗರವನ್ನು ಏಕೆ ದೇಶದ ಅತ್ಯಂತ ಕಾಳಜಿಯುಳ್ಳ ಮತ್ತು ಜವಾಬ್ದಾರಿಯುತ ನಗರ ಸ್ಥಳಗಳಲ್ಲಿ ಒಂದಾಗಿದೆ ಎಂದು ಜನರಿಗೆ ನೆನಪಿಸಿದೆ. ಬಿಎಂಟಿಸಿ ವಿಮಾನ ನಿಲ್ದಾಣದ ಬಸ್ನಲ್ಲಿ ವಿಮಾನ ನಿಲ್ದಾಣದಿಂದ ಕಾಡುಗೋಡಿಗೆ ತಡರಾತ್ರಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ದುರ್ಬಲ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ… pic.twitter.com/GUhsQpPxeV
— ಕರ್ನಾಟಕ ಪೋರ್ಟ್ಫೋಲಿಯೋ (@karnatakaportf) ಏಪ್ರಿಲ್ 6, 2026
ಅದೇ ವೇಳೆ ಕ್ಯಾಬ್ ಹಾಗೂ ಟ್ಯಾಕ್ಸಿ ಬುಕ್ ಮಾಡಿದ್ರೂ ಬುಕ್ ಆಗಲಿಲ್ಲ. ಅಲ್ಲಿಗೆ ಬಂದ ರಾಪಿಡೋ ಡ್ರೈವರ್ ಬಳಿ ಮನೆಗೆ ಬಿಡುವಂತೆ ಕೇಳಿದ್ದಾರೆ. ಎಷ್ಟು ಚಾರ್ಚ್ ಆಗುತ್ತದೆ ಎಂದು ಯೋಚಿಸಿದರೆ ಅದೆಲ್ಲಾ ಪರವಾಗಿಲ್ಲ ಮೇಡಂ, ಮೊದಲು ನೀವು ಮ್ಯಾಪ್ನಲ್ಲಿ ಲೊಕೇಶನ್ ತೋರಿಸಿ, ಲೇಟ್ ಆಗಿದೆ ಎಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಮನೆಗೆ ತಲುಪಿದ ಬಳಿಕ ಐಶ್ವರ್ಯ ಅವರು ಹಣದ ಬಗ್ಗೆ ಕೇಳಿದಾಗ ‘ಸಮಯ ತುಂಬಾ ಲೇಟ್ ಆಗಿದೆ, ಒಬ್ಬ ಮಹಿಳೆ ನಿಮ್ಮನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದು ನನ್ನ ಜವಾಬ್ದಾರಿಯಾಗಿದೆ. ಇಷ್ಟೇ ಹಣ ಬೇಕು ಎಂದು ನಾನು ಕೇಳುವುದಿಲ್ಲ, ನಿಮಗೆ ಎಷ್ಟು ಅನಿಸುತ್ತದೋ ಅಷ್ಟನ್ನು ಕೊಡಿ ಎಂದು ಉತ್ತರ ಹೇಳುತ್ತದೆ. ಈ ಘಟನೆಯ ಬಗ್ಗೆ ವಿವರಿಸುತ್ತಾ ಅಪರಿಚಿತ ವ್ಯಕ್ತಿಗಳ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ 2BHK ಮನೆಗೆ 70 ಸಾವಿರ ರೂ. ಬಾಡಿಗೆ!, ಭಯಾನಕ ಅನುಭವ ಬಿಚ್ಚಿಟ್ಟ ವ್ಯಕ್ತಿ
ಏಪ್ರಿಲ್ 6 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಹತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳು ಇವೆ. ಒಬ್ಬ ಬಳಕೆದಾರ, ಉತ್ತರ ಭಾರತಕ್ಕಿಂತ ದಕ್ಷಿಣ ಸುರಕ್ಷಿತ ಭಾರತ ಎಂದು ಜನರು ಈಗ ಕುಡಿಯಬೇಕು. ತಜ್ಞರು, ಅತ್ಯುತ್ತಮ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು ಬೆಂಗಳೂರಿನಲ್ಲಿ ಹೃದಯವಂತರು ಅಸಂಖ್ಯಾತ ಜನರಿದ್ದಾರೆ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ