ಲೇ ಆಫ್ ಅಂದ್ರೆ ಭಯವಿಲ್ಲ, ಇದು ಹೊಸ ಆರಂಭ!: ಕೆಲಸ ಕಳೆದುಕೊಂಡರೂ ಸಂಭ್ರಮಿಸಿದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಲೇ ಆಫ್ ಅಂದ್ರೆ ಭಯವಿಲ್ಲ, ಇದು ಹೊಸ ಆರಂಭ!: ಕೆಲಸ ಕಳೆದುಕೊಂಡರೂ ಸಂಭ್ರಮಿಸಿದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್


ಲೇ ಆಫ್ ಅಂದ್ರೆ ಭಯವಿಲ್ಲ, ಇದು ಹೊಸ ಆರಂಭ!: ಕೆಲಸ ಕಳೆದುಕೊಂಡರೂ ಸಂಭ್ರಮಿಸಿದ ಬೆಂಗಳೂರಿನ ಸಾಫ್ಟ್‌ವೇರ್

ಬೆಂಗಳೂರು, ಏ.8: ಬೆಂಗಳೂರಿನಲ್ಲಿ ದಿನಕ್ಕೊಂದು ಲೇ ಆಫ್ ಸುದ್ದಿ ಬರುತ್ತಿದೆ. ಎಐ ಪರಿಣಾಮದಿಂದ, ಅನೇಕರ ಕಾರಣದಿಂದ ಕೆಲಸ ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಇವೆ. ಲೇ ಆಫ್ ಆದರೆ ಎಲ್ಲರಿಗೂ ಆತಂಕ ಆಗುತ್ತಿದೆ. ಮುಂದಿನ ಜೀವನ ಹೇಗೆ? ಇಎಂಐಗಳನ್ನು ಕಟ್ಟುವುದು ಎಂಬ ಯೋಚನೆಗಳು ಇರುತ್ತವೆ. ಆದರೆ ಇಲ್ಲೊಬ್ಬರು ಐಟಿ ಉದ್ಯೋಗಿ ಅಷ್ಟು ದೊಡ್ಡ ಕೆಲಸವನ್ನು ಕಳೆದುಕೊಂಡು ಬಿಂದಾಸ್ ಆಗಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಕೆಲಸ ಕಳೆದುಕೊಂಡ ನಂತರ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಈ ಟೆಕ್ಕಿಯು ತಾನು ಕೆಲಸ ಕಳೆದುಕೊಂಡಿರುವುದನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದಾರೆ. “ಕೆಲವು ವರ್ಷಗಳಿಂದ ನಿರಂತರ ಕೆಲಸದ ಒತ್ತಡದಲ್ಲಿ. ಈಗ ಸಿಕ್ಕಿರುವ ಈ ಬಿಡುವು ನನ್ನ ವೈಯಕ್ತಿಕ ಬೆಳವಣಿಗೆಗೆ ಮತ್ತು ಕುಟುಂಬದೊಂದಿಗೆ ಸಮಯ ಸಿಕ್ಕ ಅವಕಾಶ” ಎಂದು ಅವರು ಬರೆದಿದ್ದಾರೆ. ಜೊತೆಗೆ, ಹಣಕಾಸಿನ ಸ್ವಾತಂತ್ರ್ಯ (ಆರ್ಥಿಕ ಸ್ವಾತಂತ್ರ್ಯ) ಮತ್ತು ಉಳಿತಾಯದ ಮಹತ್ವದ ಬಗ್ಗೆಯೂ ಅವರು ಬೆಳಕು ಚೆಲ್ಲಿದ್ದಾರೆ. “ನನ್ನನ್ನು ಕೆಲಸದಿಂದ ವಜಾ ಮಾಡಲಾಗಿದೆ, ಆದರೂ ನನಗೆ ಸಂತೋಷವಾಗುತ್ತಿದೆ….

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಸಿ ತಡೆ ಬಾಗಿಲು ತೆರೆದು ಮಲಗಿದ್ದ ಮಹಿಳೆಗೆ ಕಾದಿತ್ತು ಶಾಕ್!

ಈ ಪೋಸ್ಟ್ ಬೆನ್ನಲ್ಲೇ ನೆಟ್ಟಿಗರು ಎರಡು ಗುಂಪುಗಳಾಗಿ ವಿಂಗಡಣೆಯಾಗಿದ್ದಾರೆ. ಒಂದು ವರ್ಗದ ಜನರು ಅವರ ಸಕಾರಾತ್ಮಕ ಮನೋಭಾವವನ್ನು ಶ್ಲಾಘಿಸಿದರೆ, ಇನ್ನೊಂದು ವರ್ಗವು “ಇದು ಎಲ್ಲರಿಗೂ ಸಾಧ್ಯವಿಲ್ಲ, ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಲೇ ಆಫ್ ಒಂದು ಶಾಪ” ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಜೀವನ ಮತ್ತು ಮನೆ ಬಾಡಿಗೆ ಹೆಚ್ಚುತ್ತಿರುವ ಈ ಸಮಯದಲ್ಲಿ ಕೆಲಸ ಕಳೆದುಕೊಳ್ಳುವುದು ಸವಾಲಿನ ಕೆಲಸ ಎಂಬ ಚರ್ಚೆಯೂ ತೀವ್ರಗೊಂಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *