
ಅಜ್ಮೇರ್, ಏಪ್ರಿಲ್ 9: ಬಟ್ಟೆ ಒಗೆಯುವ ಕಾಯದ ಧೋಬಿಗೆ ಆದಾಯ ತೆರಿಗೆ ಇಲಾಖೆಯಿಂದ (ಆದಾಯ ತೆರಿಗೆ) ಬರೋಬ್ಬರಿ 598 ಕೋಟಿ ರೂಗಳ ಟ್ಯಾಕ್ಸ್ ನೋಟೀಸ್ ಬಂದಿದೆ. ಧೋಬಿ ಹೆಸರಿನಲ್ಲಿ ದೊಡ್ಡ ಪ್ರಮಾಣದ ಡೈಮಂಡ್ ವ್ಯಾಪಾರ ನಡೆದಿದ್ದ ಇನ್ಕಮ್ ಟ್ಯಾಕ್ಸ್ ಇಲಾಖೆಯು ಆತನ ಬೆನ್ನು ಬಿದ್ದಿದೆ. ರಾಜಸ್ಥಾನದ ಅಜ್ಮೇರ್ ನಗರದ ರಾಮಗಂಜ್ ಎಂಬಲ್ಲಿನ ರಸ್ತೆಬದಿಯಲ್ಲಿ ಬಟ್ಟೆ ಒಗೆಯುವ ಮತ್ತು ಇಸ್ತ್ರಿ ಅಂಗಡಿ ಇಟ್ಟುಕೊಂಡಿರುವ ಜಿತೇಂದ್ರ ಕುಮಾರ್ ಎಂಬ ಈ ಅಮಾಯಕ ವ್ಯಕ್ತಿ ಈಗ ನೂರಾರು ಕೋಟಿ ರೂ ಮಾತುಗಳನ್ನು ಕೇಳಿ ದಿಕ್ಕು ತೋಚದಂತಾಗಿದ್ದಾನೆ.
ಬ್ಯಾಂಕ್ ಅಕೌಂಟ್ ಇವನದ್ದಲ್ಲ… ಆದರೆ, ನೋಟೀಸ್ ಯಾಕೆ?
ಜಿತೇಂದ್ರ ಕುಮಾರ್ ಅವರ ಹೆಸರಿನಲ್ಲಿ ಇರುವ ಬ್ಯಾಂಕ್ ಅಕೌಂಟ್ ನಿಂದ ನೂರಾರು ಕೋಟಿ ರೂ ಮೊತ್ತದ ವಹಿವಾಟು ನಡೆದಿದೆ. ಆದರೆ, ಇವರನ್ನು ಕೇಳಿದಾಗ, ಆ ಬ್ಯಾಂಕ್ ಅಕೌಂಟ್ ತನ್ನದಲ್ಲ. ತನಗೇನೂ ಗೊತ್ತಿಲ್ಲ ಎಂದಿದ್ದಾನೆ. ಆದರೆ, ಎರಡು ವರ್ಷದ ಹಿಂದೆ ಪಾಲಿಯಲ್ಲಿ ಯಾವುದೋ ಕಾರ್ಯಕ್ರಮಕ್ಕೆ ಹೋದಾಗ ಪ್ಯಾನ್ ಕಾರ್ಡ್ ಕಳೆದುಕೊಂಡಿದ್ದಾಗಿ ಒಂದು ಮಾಹಿತಿ ನೀಡುತ್ತಾನೆ.
ಇದನ್ನೂ ಓದಿ: ಬೇರೆಯವರ ಪ್ಯಾನ್ ಕಾರ್ಡ್ ದಾಖಲೆ ಬಳಸಿ ಸಾಲ ಸೂರೆಗೊಂಡ ವಂಚಕರು; ನಿಮ್ಮ ಪ್ಯಾನ್ ದುರ್ಬಳಕೆ ಗುರುತಿಸುವುದು ಹೇಗೆ?
ಜಿತೇಂದ್ರ ಕುಮಾರ್ ಅವರು ವಕೀಲರೊಬ್ಬರ ಸಹಾಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಕೀಲ ರಾಕೇಶ್ ತಾಡ ಅವರು ಪಾಲಿಯಲ್ಲಿರುವ ಯಾರೂ ವ್ಯಾಪಾರಿಯು ಜಿತೇಂದ್ರನ ಅಕೌಂಟ್ ಅನ್ನು ನಿಭಾಯಿಸಬಹುದು ಎಂದು ಅನುಮಾನಿಸಿದ್ದಾರೆ. ಬ್ಯಾಂಕ್ ಮತ್ತು ಅಕೌಂಟ್ ನಿಭಾಯಿಸುತ್ತಿರುವ ವ್ಯಕ್ತಿಯ ವಿರುದ್ಧ ಎಫ್ ಐಆರ್ ಸಲ್ಲಿಸಿದ್ದಾರೆ ಎಂದು ವಕೀಲರು ಬಯಸಿದ್ದರು.
‘598 ಕೋಟಿ ರೂ ವಹಿವಾಟು ನಡೆಸುವುದರ ವಿವರ ಕೇಳಿ ಐಟಿ ಇಲಾಖೆ ಶೋಕಾಸ್ ನೋಟೀಸ್ ಕೊಟ್ಟಿದೆ. ನಾವು ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ’ ಎಂದು ರಾಕೇಸ್ ತಾಡ ಮಾಹಿತಿ ನೀಡಿದ್ದಾರೆ.
ಪ್ಯಾನ್ ಕಾರ್ಡ್ ಕಳುವಾದರೆ ಏನು ಮಾಡಬೇಕು?
ಪ್ಯಾನ್ ಮತ್ತು ಆಧಾರ್ ದಾಖಲೆಗಳು ದುಷ್ಕರ್ಮಿಗಳ ಕೈಗೆ ಸಿಕ್ಕರೆ ದುರುಪಯೋಗವಾಗುವ ಸಾಧ್ಯತೆ ಹೆಚ್ಚು. ನಿಮ್ಮ ಗುರುತಿನ ಹೆಸರಿನಲ್ಲಿ ಬ್ಯಾಂಕ್ ಅಕೌಂಟ್ ತೆರೆದು, ಅದಕ್ಕೆ ನಿಮ್ಮ ಪ್ಯಾನ್ ಅನ್ನು ನೀಡಬೇಕು. ಆ ಅಕೌಂಟ್ನಲ್ಲಿ ಏನೇ ವಹಿವಾಟು ನಡೆದರೂ ಪ್ಯಾನ್ನಲ್ಲಿದೆ. ಇದರಿಂದ ವಂಚಕರು ಸಿಕ್ಕಿಬೀಳುವ ಸಾಧ್ಯತೆ ಕಡಿಮೆ.
ಇದನ್ನೂ ಓದಿ: ಪಿಪಿಎಫ್ನಲ್ಲಿ ಕೇವಲ 1 ಪರ್ಸಂಟ್ ಬಡ್ಡಿಗೆ ಸಾಲ? ಯಾವ ವರ್ಷ, ಎಷ್ಟು ಅವಧಿ ಇತ್ಯಾದಿ ನಿಯಮಗಳು ತಿಳಿದಿರಿ
ಇಂಥ ದುರ್ಬಳಕೆಯ ಬಗ್ಗೆ ಎಚ್ಚರದಿಂದಿರಬೇಕು. ಅಪರಿಚಿತರಿಗೆ ಮೊಬೈಲ್ ಒಟಿಪಿ ನೀಡಬಾರದು. ಹೆಚ್ಚಿನ ಕ್ರೆಡಿಟ್ ಸ್ಕೋರ್ ಪರಿಶೀಲಿಸಬೇಕು. ಕ್ರೆಡಿಟ್ ರಿಪೋರ್ಟ್ ಕೂಡ ತೆಗೆಸುತ್ತಿರಬೇಕು. ಅದರ ಪ್ಯಾನ್ ಅಡಿಯಲ್ಲಿ ಏನೇನು ವಹಿವಾಟು ನಡೆಯುತ್ತದೆ. ನಿಮ್ಮ ಸಮ್ಮತಿ ಇಲ್ಲದೆ ಯಾವುದಾದರೂ ವಹಿವಾಟು ನಡೆದಿದ್ದರೆ ದೂರು ಕೊಡಬಹುದು.
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ