
ಸಂದೀಪ್ ರೆಡ್ಡಿ ವಂಗಾ (ಸಂದೀಪ್ ರೆಡ್ಡಿ ವಂಗಾ), ಪ್ರಸ್ತುತ ಭಾರತದ ಯಶಸ್ವಿ ಮತ್ತು ಬೇಡಿಕೆಯ ನಿರ್ದೇಶಕರಲ್ಲಿ ಒಬ್ಬರು. ‘ಅನಿಮಲ್’ ಸಿನಿಮಾದ ಯಶಸ್ವಿ ಬಳಿಕ ಸಂದೀಪ್ ರೆಡ್ಡಿ ಇದೀಗ ಪ್ರಭಾಸ್ ಜೊತೆಗೆ ಕೆಲಸ ಮಾಡುತ್ತಿದ್ದಾರೆ, ಪ್ರಭಾಸ್ ಅವರಿಗಾಗಿ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಸ್ಪಿರಿಟ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ ಮತ್ತೊಬ್ಬ ಸ್ಟಾರ್ ನಟನೊಟ್ಟಿಗೆ ಕೆಲಸ ಮಾಡಲು ತಯಾರಾಗಿದ್ದರೆ, ಮಾತುಕತೆ ಕೂಡ ಚಾಲ್ತಿಯಲ್ಲಿದೆ.
ಪ್ರಭಾಸ್ ಜೊತೆಗೆ ‘ಸ್ಪಿರಿಟ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ, ಅಲ್ಲು ಅರ್ಜುನ್ ಅವರಿಗಾಗಿ ಸಿನಿಮಾ ಮಾಡಲಿದ್ದಾರೆ. ಈ ಬಗ್ಗೆ ಮಾತುಕತೆ ಚಾಲ್ತಿಯಲ್ಲಿದ್ದು, ಕತೆ ಫೈನಲ್ ಆಗಿದೆಯಂತೆ. ಅಲ್ಲು ಅರ್ಜುನ್ ಸಹ ಹಲವು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ಸಂದೀಪ್ ಅವರೊಟ್ಟಿಗೆ ಕೆಲಸ ಮಾಡಲು ಆಸಕ್ತಿ ತೋರಿದ್ದಾರಂತೆ.
ಅಲ್ಲು ಅರ್ಜುನ್ ಪ್ರಸ್ತುತ ಅಟ್ಲಿ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಅಲ್ಲು ಅರ್ಜುನ್ ನಟಿಸಲಿದ್ದಾರೆ. ಅದಾದ ಬಳಿಕ ಮಲೆಯಾಳಂ ಚಿತ್ರರಂಗದ ಸ್ಟಾರ್ ನಟ, ನಿರ್ದೇಶಕ ಬಾಸಿಲ್ ಜೋಸೆಫ್ ನಿರ್ದೇಶನ ಮಾಡಲಿರುವ ಸೂಪರ್ ಹೀರೋ ಸಿನಿಮಾದಲ್ಲಿ ಅಲ್ಲು ಅರ್ಜುನ್ ನಟಿಸಲಿದ್ದಾರೆ. ಈ ಮೂರೂ ಸಿನಿಮಾಗಳು ಮುಗಿದ ಬಳಿಕವಷ್ಟೆ ಸಂದೀಪ್ ರೆಡ್ಡಿ ವಂಗಾ ಜೊತೆಗೆ ಸಿನಿಮಾ ಮಾಡಲಿದ್ದಾರೆ.
ಇದನ್ನೂ ಓದಿ:ಅಲ್ಲು ಅರ್ಜುನ್ ಸಿನಿಮಾ ‘ರಾಕಾ’ ಟೈಟಲ್ ಅರ್ಥವೇನು? ಶುರುವಾಗಿದೆ ಚರ್ಚೆ
ಸಂದೀಪ್ ರೆಡ್ಡಿ ವಂಗಾ ಸಹ ‘ಸ್ಪಿರಿಟ್’ ಮುಗಿಸಿದ ಬಳಿಕ ರಣಬೀರ್ ಕಪೂರ್ ಜೊತೆಗೆ ‘ಅನಿಮಲ್ ಪಾರ್ಕ್’ ಸಿನಿಮಾ ಮಾಡಲಿದ್ದಾರೆ. ಇದು ‘ಅನಿಮಲ್’ ಸಿನಿಮಾದ ಮುಂದುವರೆದ ಭಾಗ ಆಗಿರುತ್ತದೆ. ಅದರ ಬಳಿಕ ಅಲ್ಲು ಅರ್ಜುನ್ ಜೊತೆಗೆ ಕೆಲಸ ಪ್ರಾರಂಭಿಸಲಿದ್ದಾರೆ.
ಅಲ್ಲು ಅರ್ಜುನ್ ಅವರಿಗೆ ಮುಂದಿನ ಕೆಲ ವರ್ಷಗಳು ವೃತ್ತಿ ಜೀವನದ ಅತ್ಯುತ್ತಮ ವರ್ಷಗಳಾಗುವುದು ಖಾತ್ರಿ. ಸುಕುಮಾರ್ ಬಳಿಕ ಈಗ ಅಟ್ಲಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಲೋಕೇಶ್ ಕನಗರಾಜ್, ಬಾಸಿಲ್ ಜೋಸೆಫ್, ಸಂದೀಪ್ ರೆಡ್ಡಿ ವಂಗಾ, ಮತ್ತೆ ಸುಕುಮಾರ್, ತ್ರಿವಿಕ್ರಮ್ ಶ್ರೀನಿವಾಸ್ ಮತ್ತು ಪ್ರಶಾಂತ್ ನೀಲ್ ಅವರ ಜೊತೆಯಲ್ಲಿ ಅರ್ಜುನ್ ಕೆಲಸ ಮಾಡಲಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ