
ಮಂಗಳೂರು, ಏಪ್ರಿಲ್ 10: ಗುರುವಾರ ಪ್ರಕಟವಾದ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ (ಪಿಯುಸಿ ಟಾಪರ್ ದಿಶಾ) ಪಡೆದಿದ್ದಾಳೆ. ಈಕೆಯ ಈ ಸಾಧನೆಯ ಹಿಂದೆ ಒಂದು ನೋವಿನ ಕಥೆಯಿದೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲೇ ಅಮ್ಮನನ್ನು ಕಳೆದುಕೊಂಡ ದಿಶಾಳಿಗೆ ಧೃತಿಗೆಡದೆ ತನ್ನ ಗುರಿಯನ್ನು ಸಾಧಿಸಲು ಪ್ರೇರೇಪಿಸಿದ್ದು ಆಕೆಯ ತಾಯಿಯ ಮಾತುಗಳು.
ಪರೀಕ್ಷೆ ಮುಗಿಸಿ ಬಂದ ದಿಶಾಳಿಗೆ ಕಾದಿತ್ತು!
ದಿನೇಶ್ ಹಾಗೂ ಸವಿತಾ ದಂಪತಿಯ ಇಬ್ಬರು ಮಕ್ಕಳಲ್ಲಿ ಹಿರಿಯವಳು ದಿಶಾ. ತಂಗಿ ದೀಕ್ಷಾ ಈಗಷ್ಟೇ ಎಸ್ಎಸ್ಎಲ್ಸಿಗೆ ಕಾಲಿಟ್ಟಿದ್ದಾಳೆ. ಅಂದು ದಿಶಾ ಗಣಿತ ಪರೀಕ್ಷೆಗೆ ರೂಂನಲ್ಲಿ ಕುಳಿತು ತಯಾರಿ ನಡೆಸುತ್ತಿದ್ದಳು. ರಾತ್ರಿಯಾಗುತ್ತಿದ್ದಂತೆ ರೂಂ ನ ಹೊರಗೆ ಯಾರೋ ಬಿದ್ದಂತೆ ಶಬ್ದ ಕೇಳಿ ಬಂದಿದೆ. ಹೊರಗೆ ಬಂದು ನೋಡಿದಾಗ ದಿಶಾ ತಾಯಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದ್ದರು. ತಕ್ಷಣಕ್ಕೆ ಏನೂ ಆಗಿಲ್ಲ ಎಂಬಂತೆ ಇದ್ದ ದಿಶಾ ತಾಯಿ ಮರುದಿನ ಬೆಳಗ್ಗಿನ ವೇಳೆಗೆ ಪುಸ್ತಕ ತಪ್ಪಿದ್ದರು. ಮನೆಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಅವರನ್ನು ದಾಖಲಿಸಿದ್ದರು. ಮರುದಿನ ಆಕೆಯನ್ನು ವೆನ್ಲಾಕ್ ಆಸ್ಪತ್ರೆಯಿಂದ ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆ ತರಲಾಯಿತು.
ತಾಯಿಯ ಆರೋಗ್ಯ ಸಂಪೂರ್ಣ ಹದಗೆಟ್ಟ ವೈದ್ಯರು ಹೆಚ್ಚು ದಿನ ಬದುಕೋದಿಲ್ಲ ಎಂದು ಹೇಳಿದ್ದಾರೆ. ಆದರೆ ಅದೇ ದಿನ ದಿಶಾ ಏಕನಾಮಿಕ್ಸ್ ಪರೀಕ್ಷೆ ಬರೆಯಬೇಕಿತ್ತು. ಪರೀಕ್ಷೆ ಬರೆದು ಅಮ್ಮನನ್ನು ನೋಡಲು ಆಸ್ಪತ್ರೆಗೆ ಓಡೋಡಿ ಬಂದಿಳು. ಆದರೆ ಅದೇ ದಿನ ರಾತ್ರಿ ದಿಶಾ ತಾಯಿ ಸವಿತಾ ಚಿಕಿತ್ಸೆ ಫಲಕಾರಿಯಾಗದೆ ಮೃತರಾದರು. ತಾಯಿಯನ್ನು ಕಳೆದುಕೊಂಡ ಸುದ್ದಿ ಕೇಳಿ ದಿಶಾಗೆ ತಲೆಯ ಮೇಲೆ ಆಕಾಶವೇ ಕಳಚಿ ಬಿದ್ದಂತೆ. ಒಂದೆಡೆ ಹೆತ್ತ ತಾಯಿಯನ್ನು ಕಳೆದುಕೊಂಡ, ಇನ್ನೊಂದೆಡೆ ಭವಿಷ್ಯವನ್ನು ನಿರ್ಧರಿಸುವ ಮುಂದಿನ ಪರೀಕ್ಷೆಗಳು.
ಅಮ್ಮನಿಗಾಗಿ ಸಾಧನೆ ಮಾಡಿದೆ ಎಂದ ವಿದ್ಯಾರ್ಥಿನಿ
ದಿಶಾ ಪರೀಕ್ಷೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾಗ ಆಕೆಯ ತಾಯಿ ನೀನು ಕಷ್ಟಪಟ್ಟಿದ್ದೀಯ, ದೇವರು ಇದ್ದಾನೆ, ಯಾರ ಹಣದಲ್ಲಿ ಬರೆದಿದೆಯೋ ಅವರಿಗೆ ಸಿಗುತ್ತೆ. ಹೆದರಬೇಡ ಎಂದು ಧೈರ್ಯ ಹೇಳುತ್ತಿದ್ದರಂತೆ. ಹೀಗಾಗಿ ಅಮ್ಮನ ಆ ಮಾತುಗಳನ್ನು ಶಕ್ತಿಯಾಗಿಸಿ ದಿಶಾ ಪರೀಕ್ಷೆ ಬರೆದಿದ್ದಳು. ಆ ಸಮಯದಲ್ಲಿ ಏನು ಮಾಡಬೇಕೆಂದು ತಿಳಿಯದಾಗ ನನ್ನ ಅಮ್ಮನಿಗೋಸ್ಕರವಾದರೂ ನಾನು ಇದನ್ನು ಸಾಧಿಸಬೇಕಿತ್ತು ಎಂದು ದಿಶಾ ಈ ಸಾಧನೆಯ ಬಳಿಕ ಭಾವುಕರಾಗಿ ಹೇಳಿದ್ದಾಳೆ.
ಈ ಸಮಯದಲ್ಲಿ ಆಕೆಗೆ ಬೆಂಬಲವಾಗಿ ನಿಂತಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು. ಕೌಟುಂಬಿಕ ಸಮಸ್ಯೆಯಿಂದಾಗಿ ಈಗ ದಿಶಾ ಮತ್ತು ಆಕೆಯ ತಂಗಿ ಶಿಕ್ಷಕಿ ವೀಣಾ ಎಂಬುವರ ಮನೆಯಲ್ಲಿದ್ದು, ಮುಂದೆ ಹಾಸ್ಟೆಲ್ ಅಥವಾ ಪಿಜಿಯಲ್ಲಿದ್ದು ವಿದ್ಯಾಭ್ಯಾಸ ಮುಂದುವರಿಸುವ ಬಗ್ಗೆ ಇನ್ನಷ್ಟೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ದಿಶಾ ತನ್ನ ತಾಯಿಯ ಕನಸಿನಂತೆಯೇ ಸಿಎ ಮಾಡಲು ಮುಂದಾಗಿದ್ದು, ಪ್ರಸ್ತುತ ಸಿ.ಎ ಫೌಂಡೇಶನ್ ಪರೀಕ್ಷೆಗೂ ಸಜ್ಜಾಗುತ್ತಿದ್ದಾಳೆ.
ಇದನ್ನೂ ತಾಯಿ ಓದಿ ನಿಧನರಾದಾಗಲೇ ಪರೀಕ್ಷೆ ಬರೆದು ಕರ್ನಾಟಕಕ್ಕೆ ಟಾಪರ್:ನೋವಲ್ಲೂ ಸಾಧಿಸಿದ ದಿಶಾ
ತಾಯಿಯನ್ನು ಕಳೆದುಕೊಂಡ ದಿಶಾಳಿಗೆ ಆಳ್ವಾಸ್ ಸಂಸ್ಥೆ ವಿಶೇಷ ಬೆಂಬಲ ನೀಡಿದೆ. ಮುಂದೆ ಆಕೆಯ ಪಾಲಕನಾಗಿ ಆಕೆಯ ಜೊತೆ ನಿಲ್ಲುತ್ತೇನೆ, ಎಲ್ಲಾ ಶಿಕ್ಷಣವನ್ನು ಹಂತ ಹಂತವಾಗಿ ಸಹಕಾರ ನೀಡುವುದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ್ ಆಳ್ವ ಹೇಳಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600 ರಲ್ಲಿ 600 ಅಂಕ ಪಡೆದ ಸಾಧನೆಗಾಗಿ ಮೂರು ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಒಟ್ಟಿನಲ್ಲಿ ದಿಶಾ ಅವರ ಈ ಸಾಧನೆ ಎಲ್ಲಾ ವಿದ್ಯಾರ್ಥಿಗಳಿಗೂ ಮಾದರಿಯಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ