
ಬೆಂಗಳೂರು, ಏಪ್ರಿಲ್ 10: ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ವಿದ್ಯಾರ್ಥಿನಿ ತನುಶ್ರೀ ಸಾವು (ತನುಶ್ರೀ ಸಾವಿನ ಪ್ರಕರಣ) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಮೊದಲು ತಾಯಿಯ ಮೇಲೆ ಅನುಮಾನ ಕಂಡುಬಂದರೂ, ಇದು ದ್ವಿತೀಯ ಪಿಯುಸಿ ಪರೀಕ್ಷೆ ಫೇಲ್ ಆಗಿ ಮನನೊಂದು ಆತ್ಮಹತ್ಯೆ ಎಂಬುದಕ್ಕೆ ಪುಷ್ಟೀಕರಿಸುತ್ತಿದೆ. ತನುಶ್ರೀ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಸಂಜೆ ಇದೆ. ಫಲಿತಾಂಶ ಕೂಡ ವಿದ್ಯಾರ್ಥಿನಿಯ ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಅಸಲಿ ಸತ್ಯ ಬಹಿರಂಗವಾಗಿದೆ.
ಏನಿದು ಬಿಗ್ ಟ್ವಿಸ್ಟ್?
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತನುಶ್ರೀ ಗಣಿತ ಮತ್ತು ರಸಾಯನಶಾಸ್ತ್ರ ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದಳು. ಇದರಿಂದ ತೀವ್ರ ಮನನೊಂದಿದ್ದ ಆಕೆ, ಸಾವಿಗೂ ಮುನ್ನ ಸೋಶಿಯಲ್ ಮೀಡಿಯಾ ಸ್ಟೇಟಸ್ನಲ್ಲಿ ‘3 PM ಫೀಲ್ಡಿಂಗ್ ಸೆಟ್’ ಎಂದು ಬರೆದುಕೊಂಡಿದ್ದಳು. ಇದನ್ನು ಗಮನಿಸಿದ ಆಕೆಯ ಸ್ನೇಹಿತೆ ಗಾಬರಿಗೊಂಡು ‘ಮ್ಮ ಮನೆಗೆ ಬಾ’ ಎಂದು ಮೆಸೇಜ್ ಮಾಡಿದ್ದಳು. ತನುಶ್ರೀ ಕೂಡ ‘ಸರಿ ಬರ್ತೀನಿ’ ಎಂದು ಉತ್ತರಿಸಿದಳು.
ಆದರೆ, ತನುಶ್ರೀಯ ಸ್ಟೇಟಸ್ ನೋಡಿ ಅನುಮಾನಗೊಂಡ ಸ್ನೇಹಿತೆ ತಕ್ಷಣ ಆಕೆಯ ಮನೆಗೆ ಓಡಿ ಬಂದಿದ್ದಳು. ಅಷ್ಟರಲ್ಲಾಗಲೇ ತನುಶ್ರೀ ನೇಣು ಬಿಗಿದುಕೊಂಡಿದ್ದಳು. ಕೂಡಲೇ ಸ್ನೇಹಿತೆ ತನ್ನ ತಂದೆ ಅಂಥೋನಿ ಅವರಿಗೆ ಕರೆ ಮಾಡಿದ್ದು, ಅವರು ಬಂದು ಬಾಗಿಲು ಒಡೆದು ತನುಶ್ರೀಯನ್ನು ಕೆಳಕ್ಕೆ ಇಳಿಸಿದ್ದಾರೆ. ಆಗ ತನುಶ್ರೀ ಉಸಿರಾಡುತ್ತಿದ್ದಳು. ಕೂಡಲೇ ಆಕೆಯನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಾರ್ಗಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ.
ಈ ಬೆಳವಣಿಗೆಯಿಂದಾಗಿ ಪ್ರಕರಣಕ್ಕೆ ಮತ್ತೊಂದು ಆಯಾಮ ಪಡೆ. ಪೊಲೀಸರು ಯುಡಿಆರ್ (UDR) ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು: ತಾಯಿಯ ನಡವಳಿಕೆಯ ಮೇಲೆಯೇ ಫಲಿತಾಂಶದ ಶಂಕೆ!
ಆರಂಭದಲ್ಲಿ ತನುಶ್ರೀಯ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ಇದು ಆತ್ಮಹತ್ಯೆ ಆಗಿರಲಾರದು ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದರು. ಆದರೆ, ಸದ್ಯ ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಎಂಬುದು ಗೊತ್ತಾಗಿದ್ದು, ತನಿಖೆ ಮುಂದುವರಿದಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ