
ರಾಯಚೂರು, ಏಪ್ರಿಲ್ 11: ರಾಯಚೂರು ಜಿಲ್ಲೆಯ ವಿದ್ಯಾರ್ಥಿ ವಿಕಾಸ್, ಪಿಯುಸಿ ಫಲಿತಾಂಶದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ್ಯಾಂಕ್ ಮತ್ತು ರಾಯಚೂರು ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಇವರು ರಾಯಚೂರು ನಗರದ ಆಟೋ ಚಾಲಕ ಹನಮಂತು ಅವರ ಮಗ. ವಿದ್ಯಾನಿಧಿ ಪಿಯು ತಮ್ಮ ವಿದ್ಯಾರ್ಥಿಯಾಗಿರುವ ವಿಕಾಸ್, ಈ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಪೋಷಕರು ಮತ್ತು ಅಕ್ಕ ನೀಡಿದ ಮಾರ್ಗದರ್ಶನ ಮತ್ತು ಬೆಂಬಲವನ್ನು ಸ್ಮರಿಸಿದ್ದಾರೆ. ತಮ್ಮ ತಂದೆಯ ಪರಿಶ್ರಮವನ್ನು ಕಣ್ಣಾರೆ ಕಂಡ ವಿಕಾಸ್, ಅದಕ್ಕೆ ತಕ್ಕ ಪ್ರತಿಫಲ ನೀಡಲು ಸತತವಾಗಿ ಶ್ರಮಿಸಿದ್ದಾರೆ. ಮುಂದೆ ಬಿಕಾಂ ಪದವಿಯಲ್ಲಿ ಸಿಎ ಓದುವ ಗುರಿಯನ್ನು ಹೊಂದಿದೆ. ವಿಕಾಸ್ ‘ಟಿವಿ9’ ಜತೆ ನಡೆಸಿರುವ ಮಾತುಕತೆ ಇಲ್ಲಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.