Headlines

ಒಂಟಿ ಕಾಲಿನ ಖದೀಮ, ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ: ನಟೋರಿಯಸ್ ಕಳ್ಳರ ಫ್ಲ್ಯಾಶ್​ ಬ್ಯಾಕೇ ಭಯಾನಕ

ಒಂಟಿ ಕಾಲಿನ ಖದೀಮ, ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ: ನಟೋರಿಯಸ್ ಕಳ್ಳರ ಫ್ಲ್ಯಾಶ್​ ಬ್ಯಾಕೇ ಭಯಾನಕ


ಒಂಟಿ ಕಾಲಿನ ಖದೀಮ, ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ: ನಟೋರಿಯಸ್ ಕಳ್ಳರ ಫ್ಲ್ಯಾಶ್ ಬ್ಯಾಕೆ ಭಯಾನಕ

ಆನೇಕಲ್, ಏಪ್ರಿಲ್ 12: ಒಬ್ಬ ಒಂಟಿ ಕಾಲಿನಲ್ಲಿ ರಾಬರಿ ಮಾಡುವ ಖದೀಮ, ಮತ್ತೊಬ್ಬ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ. ಈ ಇಬ್ಬರು ಜೋಡಿ ಸಿಕ್ಕ ಸಿಕ್ಕ ಕಡೆಗಳಲ್ಲಿ ದರೋಡೆ ಮಾಡುತ್ತಿದ್ದರು. ಆದರೆ ಇದೀಗ ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ನ್ಯಾಟೋರಿಯಸ್ ದರೋಡೆಕೋರರನ್ನು (ದರೋಡೆಕೋರರು) ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ. ಕೃಷ್ಣನಾಯಕ್ ಅಲಿಯಾಸ್ ಕುಂಟ ಕೃಷ್ಣ. ಈತನಿಗೆ ಹಾವಳಿ ಕೃಷ್ಣ ಅಂತ ಕೂಡ ಕರೆಯುತ್ತಾರೆ. ಇತರ ನವೀನ್ ಅಲಿಯಾಸ್ ಕಾಳಪ್ಪ. ರಾಬರಿ ಕಾಳ ಅಂತ ಇನ್ನೊಂದು ಹೆಸರಿದೆ. ಸದ್ಯ ಇವರಿಬ್ಬರ ಹೆಡೆಮುರಿ ಕಟ್ಟಿದ್ದಾರೆ.

ನಟೋರಿಯಸ್ ಕಳ್ಳರ ಫ್ಲ್ಯಾಶ್ ಬ್ಯಾಕ್ ಭಯಾನಕ

ಇನ್ನು ಈ ಇಬ್ಬರು ನ್ಯಾಟೋರಿಯಸ್ ಕಳ್ಳರ ಫ್ಲ್ಯಾಶ್ ಬ್ಯಾಕ್ ಭಯಾನಕವಾಗಿದೆ. ಕೃಷ್ಣನಾಯರ್ ಆಟೋ ಓಡಿಸಿಕೊಂಡಿದ್ದ. ಚಿಕ್ಕ ವಯಸ್ಸಿನಲ್ಲಿ ಕಳ್ಳತನ, ರಾಬರಿ ಮಾಡುತ್ತಿದ್ದಾರೆ. ಆಟೋದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿ ರಾಬರಿ ಮಾಡುತ್ತಿದ್ದರು. ಸಿಟಿ ಈತನ ಕಾಲಿಗೆ ಫೈರಿಂಗ್ ಮಾಡಲಾಗಿತ್ತು. ಹೀಗಾಗಿ ಒಂದು ಕಾಲು ಕಳೆದುಕೊಂಡಿದ್ದ.

ಇದನ್ನೂ ಓದಿ: ಮದುವೆ ಮನೆಗಳೇ ಈತನ ಟಾರ್ಗೆಟ್: ಕುಖ್ಯಾತ ಕಳ್ಳ ಪಲ್ಸರ್ ಬಾಬು ಅರೆಸ್ಟ್; 42 ಲಕ್ಷ ರೂ.ಗೂ ಅಧಿಕ ಮೌಲ್ಯದ ಸ್ವತ್ತು ವಶ!

ಕಾಲು ಹೋಗಿದ್ದರು, ಅಷ್ಟೇ ಅಲ್ಲದೆ ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಕಿರಾತಕ, ಒಂದೇ ಕಾಲಿನಲ್ಲಿ ಆಟೋ ಓಡಿಸುತ್ತಾರೆ. ಅದೇ ಒಂಟಿ ಕಾಲಿನಲ್ಲಿ ಸಹಚರರ ಜೊತೆ ಅಮಾಯಕರ ಕಿಡ್ನ್ಯಾಪ್ ಮಾಡುತ್ತಾನೆ. ಹಣ ದೋಚಿ, ಹಲ್ಲೆ ನಡೆಸಿ ಬಿಟ್ಟು ಪರಾರಿಯಾಗುತ್ತಾನೆ. ಈವರೆಗೆ ಬರೋಬ್ಬರಿ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗವಹಿಸಿದ್ದು, ಬನ್ನೇರುಘಟ್ಟ, ಸೂರ್ಯನಗರ, ಹೆಬ್ಬಗೋಡಿ, ಜಿಗಣಿ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ಶಾಸಕರ ಕಾರಿಗೆ ಬೆಂಕಿಯಿಟ್ಟಿದ್ದ ಭೂಪ

ಮತ್ತೋರ್ವ ಕಳ್ಳ ನವೀನ್ ಅಲಿಯಾಸ್ ರಾಬರಿ ಕಾಳ, 2021ರಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟಿದ್ದ. ಮನೆಯ ಬಳಿ ನಿಲ್ಲಿಸಿದ ಎರಡು ಕಾರುಗಳು ಬೆಂಕಿಗಾಹುತಿಯಾಗಿದ್ದವು. ಆ ಪ್ರಕರಣದಲ್ಲಿ ಪ್ರಮುಖ ಆರೋಪಿ. ಬಂಧಿಸಿ ಜೈಲಿಗಟ್ಟಿದ್ದರು. ಆದರೆ ಜೈಲಿನಿಂದ ಹೊರಬಂದು ಹಳೆ ಚಾಳಿಯಲ್ಲಿದ್ದ. ಈತ ಬೈಕ್ ಸೇರಿದಂತೆ ರಾಬರಿ ಮಾಡುತ್ತಿದ್ದಾರೆ. ಹಾವಳಿ ಕೃಷ್ಣನ ಜೊತೆ ಸೇರಿದ ಕಾಳಪ್ಪ ಸಿಕ್ಕ ಸಿಕ್ಕ ಕಡೆಗಳಲ್ಲಿ ರಾಬರಿ ಮಾಡುತ್ತಿದ್ದ.

ಆಟೋಗೆ ಹತ್ತಿಸಿಕೊಂಡು ವ್ಯಕ್ತಿಯ ರಾಬರಿ: ಕಿವಿ ಕಟ್ ಮಾಡಿ ಚಿತ್ರಹಿಂಸೆ

ಇನ್ನು ಈ ಇಬ್ಬರು ನಟೋರಿಯಸ್ ದರೋಡೆಕೋರರು ಇತ್ತೀಚೆಗೆ ಯಾರಂಡಹಳ್ಳಿ ಸಮೀಪ ರಾಬರಿ ಮಾಡಿದ್ದಾರೆ. ಸುಂದರ್ ರಾಜ್ ಎಂಬುವವರನ್ನು ಹಾವಳಿ ಕೃಷ್ಣನ ಆಟೋಗೆ ಹತ್ತಿಸಿಕೊಂಡ ಖದೀಮರು, ಜೇಬಿನಲ್ಲಿದ್ದ ಹಣ, ಮೊಬೈಲ್ ಕಿತ್ತುಕೊಂಡಿದ್ದಾರೆ. ಬಳಿಕ ಎಟಿಎಂ ಕಾರ್ಡ್ ಕೊಡುವಂತೆ ಆವಾಜ್ ಹಾಕಿದ್ದಾರೆ. ಕೊಡದಿದ್ದಾಗ ಕಿವಿ ಕಟ್ ಮಾಡಿ ಚಿತ್ರಹಿಂಸೆ. ಬಳಿಕ ಎಟಿಎಂ ಕಿತ್ತುಕೊಂಡು 1 ಲಕ್ಷ ರೂ ಹಣ ಡ್ರಾ ಮಾಡಿದ್ದಾರೆ. ನಂತರ ಆತನ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿ ಆಗಿದ್ದರು. ಪ್ರಕರಣ ದಾಖಲಿಸಿಕೊಂಡ ಜಿಗಣಿ ಪತ್ತೆ, ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ತಂಡ ರಚನೆ ಮಾಡಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *