
ಕೋಲಾರ, ಏಪ್ರಿಲ್ 13: ಕೆರೆಗೆ ಬಿದ್ದಿದ್ದ ಮಕ್ಕಳನ್ನ ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ (ಸಾವು) ಕೋಲಾರದ ಅರಹಳ್ಳಿ ಕೆರೆಯಲ್ಲಿ ಘಟನೆ ನಡೆದಿದೆ. ಮೊಹಮದಿ(25) ಮತ್ತು ಸಲ್ಮಾ (26) ನೀರುಪಾಲಾದ ಮಹಿಳೆಯರು. ಮೃತ ಮಹಿಳೆಯರು ನಿಸಾರ್ ನಗರದ ನಿವಾಸಿಗಳು. ಸದ್ಯ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಕೋ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಡೆದಿದ್ದೇನು?
ಕೋಲಾರದ ಅರಹಳ್ಳಿ ಕೆರೆಗೆ ಮಹಿಳೆಯರು ಸೇರಿದಂತೆ ಮಕ್ಕಳು ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ ಮಕ್ಕಳು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ನೀರಿಗೆ ಇಳಿದ ಮೊಹಮದಿ ಮತ್ತು ಸಲ್ಮಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಕಾರ್ಯಕ್ರಮ ಹಿನ್ನೆಲೆ ಸಲ್ಮಾ ಬೆಂಗಳೂರಿಂದ ಬಂದಿದ್ದರು.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು, ಯುವಕ ಸಾವು!
ಇನ್ನು ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇನಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕ ಸ್ಥಳದಲ್ಲಿಯೇ ಕಾಣಿಸಿಕೊಂಡಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕೃಷ್ಣಾವರಂ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಕ್ರೆಟಾ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಜಲ ಕಂಟಕ: ಕರ್ನಾಟಕದಲ್ಲಿ ಸೋಮವಾರ ಒಂದೇ ದಿನ 10 ಮಂದಿ ನೀರು ಪಾಲು
ಅಪಘಾತದಲ್ಲಿ ಬೆಂಗಳೂರಿನ ಮೂಲದ ದೇವಾನಂದ್ (24) ಎಂಬುವವರು ಕಾಣಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ಸರ್ವೇಶ್ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ವಿಷಯ ತಿಳಿಯದೆಯೇ ಬೇತಮಂಗಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ರಸ್ತೆಯಿಂದ ಸಂಚಾರಕ್ಕೆ ಒದಗಿಸಲಾಗಿದೆ. ಅತಿಯಾದ ವೇಗವೇ ಈ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.