
ಬೆಂಗಳೂರು, ಏಪ್ರಿಲ್ 13: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ (ಐಪಿಎಲ್) ಕ್ರೇಜ್ ಶುರುವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯಗಳನ್ನು ನೋಡಲು ಕಾತರರಾಗಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಗುಡ್ ನ್ಯೂಸ್ ನೀಡಿದೆ. ಏಪ್ರಿಲ್ 15, 18 ಮತ್ತು 24 ರಂದು ನಡೆಯಲಿರುವ ಪಂದ್ಯಗಳ ದಿನದಂದು ರಾತ್ರಿ 11 ರಿಂದ ತಡರಾತ್ರಿ 2 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ 15, 18 ಮತ್ತು 24 ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಬಿಎಂಆರ್ ಸಿಎಲ್ ಪ್ರಕಟಿಸಿದೆ. ಐಪಿಎಲ್ ಅಭಿಮಾನಿಗಳಿಗೆ ಸಹಕಾರಿ ಆಗುವ ದೃಷ್ಟಿಯಲ್ಲಿ ಹೆಚ್ಚುವರಿ ಸೇವೆಯನ್ನು ಒದಗಿಸಲಾಗುತ್ತಿದೆ. ರಾತ್ರಿ 11 ರಿಂದ ತಡರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ ಇರಲಿದೆ.
ಬಿಎಂಆರ್ ಸಿಎಲ್ ಟ್ವೀಟ್
ಬೆಂಗಳೂರಿನಲ್ಲಿ ಐಪಿಎಲ್ 2026 ಪಂದ್ಯಕ್ಕಾಗಿ ಮೆಟ್ರೋ ಸೇವೆಗಳ ವಿಸ್ತರಣೆ. / ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ.ಹೆಚ್ಚಿನ ವಿವರಗಳಿಗೆ ಮಾಧ್ಯಮ ಪ್ರಕಟಣೆಯನ್ನು ವೀಕ್ಷಿಸಿ. pic.twitter.com/LAobmD1IT3
— ನಮ್ಮ ಮೆಟ್ರೋ (@OfficialBMRCL) ಏಪ್ರಿಲ್ 13, 2026
ಕೊನೆಯ ರೈಲುಗಳ ಸಮಯ
- ವೈಟ್ಫೀಲ್ಡ್: ರಾತ್ರಿ 12:30 ಗಂಟೆಗೆ
- ಚಲ್ಲಘಟ್ಟ: ರಾತ್ರಿ 12:45 ಗಂಟೆಗೆ
- ಸಿಲ್ಕ್ ಇನ್ಸ್ಟಿಟ್ಯೂಟ್ ಮತ್ತು ಮಾದವಾರ: ರಾತ್ರಿ 12:45 ಗಂಟೆಗೆ
- ಬೊಮ್ಮಸಂದ್ರ: ರಾತ್ರಿ 1 ಗಂಟೆಗೆ
- ಆರ್.ವಿ. ರಸ್ತೆ: ರಾತ್ರಿ 2 ಗಂಟೆಗೆ
- ಮೆಜೆಸ್ಟಿಕ್ನಿಂದ ನಾಲ್ಕೂ ದಿಕ್ಕುಗಳಿಗೆ ತಡರಾತ್ರಿ 1:30ಕ್ಕೆ ಕೊನೆಯ ರೈಲು ಹೊರಡಲಿದೆ.
ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ
ಇನ್ನು ಐಪಿಎಲ್ ಟಿಕೆಟ್ನಲ್ಲೇ ಮೆಟ್ರೋ ಕ್ಯೂಆರ್ (ಕ್ಯೂಆರ್) ಕೋಡ್ ಲಭ್ಯವಿದ್ದು, ಎರಡು ಮಾರ್ಗಗಳ ಪ್ರಯಾಣಕ್ಕೆ ಇದನ್ನು ಬಳಸಲಾಗುವುದಿಲ್ಲ. ಸ್ಟೇಡಿಯಂಗೆ ಹತ್ತಿರವಿರುವ ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳನ್ನು ಬಳಸಲು ಸೂಚಿಸಲಾಗಿದೆ. ಅದೇ ರೀತಿಯಾಗಿ ನಿಲ್ದಾಣಗಳಲ್ಲಿ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನಗಳಿಗೆ 30 ರೂ, ಕಾರುಗಳಿಗೆ 60 ರೂ ಪಾರ್ಕಿಂಗ್ ಶುಲ್ಕ ನಿಗದಿಪಡಿಸಲಾಗಿದೆ. ಆ ಮೂಲಕ ಟ್ರಾಫಿಕ್ ಜಾಮ್ ತಪ್ಪಿಸಲು ಮೆಟ್ರೋ ಬಳಸುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.
ಇದನ್ನೂ ಓದಿ: ಬಿಎಂಟಿಸಿಯ ಈ ಬಸ್ಸಿನಲ್ಲಿ ಕೇವಲ 6 ರೂ.ಗೆ ಮೆಟ್ರೋ ನಿಲ್ದಾಣಕ್ಕೆ ಹೋಗಬಹುದು!: ಎಲ್ಲಿಂದ ಎಲ್ಲಿಗೆ? ಇಲ್ಲಿದೆ ಮಾಹಿತಿ
ಇನ್ನು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ ದೃಷ್ಟಿಯಿಂದ ಬಿಎಂಟಿಸಿ ಬಸ್ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಪಂದ್ಯ ನಡೆಯುವ ದಿನದಂದು ಬಿಎಂಟಿಸಿ ಬಸ್ಗಳ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿ ಬಸ್ಸುಗಳನ್ನು ನಿಗದಿಪಡಿಸಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಪ್ರದೇಶಗಳ ನಡುವೆ ಸಂಚರಿಸುವ ಬಸ್ಗಳ ವಿವರ
- ಸರ್ಜಾಪುರ ಮತ್ತು ಕಾಡುಗೋಡಿ ಬಸ್ ನಿಲ್ದಾಣ
- ಆಯ್ದ ಸಿಟಿ (ಹೊಸೂರು ರಸ್ತೆ)
- ಬನ್ನೇರುಘಟ್ಟ ಪಾರ್ಕ್
- ಆರ್.ಕೆ. ಹೆಗಡೆ ನಗರ – ಯಲಹಂಕ (ನಾಗವಾರ, ಟ್ಯಾನರಿ ರಸ್ತೆ ಮೂಲಕ)
- ಹೊಸಕೋಟೆ
- ಬನಶಂಕರಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.