ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ ‘ಬೇಡಿಕೆಗಳ ಪಟ್ಟಿಯಲ್ಲಿ’ ಏನೇನಿದೆ?

ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ ‘ಬೇಡಿಕೆಗಳ ಪಟ್ಟಿಯಲ್ಲಿ’ ಏನೇನಿದೆ?


ಬೆಂಗಳೂರು, ಏ.15: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಎಚ್‌ಎಎಲ್ (ಎಚ್‌ಎಎಲ್) ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಗಿದೆ. ಯಾವೆಲ್ಲ ಮನವಿಗಳನ್ನು ಮಾಡಲಾಗಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ.

ಪ್ರಮುಖ 18 ಬೇಡಿಕೆಗಳು:

  • ಕೋಲಾರ ಕೋಚ್ ಫ್ಯಾಕ್ಟರಿ: 1,123 ಭೂಮಿ ನೀಡಿದ್ದರೂ ಅನುಷ್ಠಾನಗೊಳ್ಳಲು ಈ ಯೋಜನೆ ಪುನರುಜ್ಜೀವನಕ್ಕೆ ಮನವಿ.
  • ಹೈ-ಸ್ಪೀಡ್ ರೈಲು ವಿಸ್ತರಣೆ: ಬೆಂಗಳೂರು-ಮೈಸೂರು ವಿಭಾಗವನ್ನು ಪ್ರಸ್ತಾವಿತ ಹೈ-ಸ್ಪೀಡ್ ರೈಲು ಕಾರಿಡಾರ್‌ನಲ್ಲಿ ಸೇರಿಸಲು ಕೋರಿಕೆ.
  • ಸಬರ್ಬನ್ ರೈಲು ಮತ್ತು ಮುಂಬೈ ಕಾರಿಡಾರ್: ಬೆಂಗಳೂರು ಉಪನಗರ ರೈಲು ಯೋಜನೆಗೆ ಹಣ ಬಿಡುಗಡೆ ಹಾಗೂ ಕಿತ್ತೂರು-ಕಲ್ಯಾಣ ಕರ್ನಾಟಕ ಸಂಪರ್ಕಿಸುವ ಬೆಂಗಳೂರು-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ ಆರಂಭಿಸಲು ವಿನಂತಿ.
  • ಜಲ ಜೀವನ್ ಮಿಷನ್ (ಜೆಜೆಎಂ): ಕೇಂದ್ರದಿಂದ ಬರಬೇಕಾದ ₹17,554 ಕೋಟಿ ಬಾಕಿ ಹಣ ಬಿಡುಗಡೆಗೆ ಒತ್ತಾಯ.
  • 15ನೇ ಹಣಕಾಸು ಆಯೋಗದ ಅನುದಾನ: ಗ್ರಾಮ ಪಂಚಾಯತ್‌ಗಳಿಗೆ ಬರಬೇಕಾದ ₹2,860 ಕೋಟಿ ಅನುದಾನ ಬಿಡುಗಡೆಗೆ ಮನವಿ.
  • ರಾಷ್ಟ್ರೀಯ ಹೆದ್ದಾರಿ ಯೋಜನೆಗಳು: ಕಳೆದ 12 ವರ್ಷಗಳಿಂದ ಬಾಕಿ ಇರುವ ಹೊಸ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಮಂಜೂರಾತಿಗೆ ಕೋರಿಕೆ.
  • ಕೊರತೆ ಅನುದಾನ: 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ₹5,495 ಕೋಟಿ ಬಿಡುಗಡೆಗೆ ವಿನಂತಿ.
  • ಬೆಂಗಳೂರಿಗೆ ವಿಶೇಷ ಕಾರ್ಯಕ್ರಮ: ನಗರದ ಮೂಲಸೌಕರ್ಯ ಅಭಿವೃದ್ಧಿಗೆ ₹26,000 ಕೋಟಿ ವಿಶೇಷ ಅನುದಾನಕ್ಕೆ ಬೇಡಿಕೆ.
  • ಮೇಕೆದಾಟು ಯೋಜನೆ: ಕುಡಿಯುವ ನೀರಿನ ಉದ್ದೇಶದ ಈ ಯೋಜನೆಗೆ ಶೀಘ್ರವಾಗಿ ಕೇಂದ್ರದ ಅನುಮೋದನೆಗೆ ಒತ್ತಾಯ.
  • ಭದ್ರಾ ಮೇಲ್ದಂಡೆ ಯೋಜನೆ: ಈ ಯೋಜನೆಗೆ ‘ರಾಷ್ಟ್ರೀಯ ಮಾನ್ಯತೆ’ ನೀಡಿ, ಘೋಷಿತ ₹5,300 ಕೋಟಿ ಸಹಾಯಧನ ಬಿಡುಗಡೆಗೆ ಮನವಿ.
  • ಕೃಷ್ಣಾ ಮೇಲ್ದಂಡೆ ಯೋಜನೆ (UKP-III): ಕೃಷ್ಣಾ ನ್ಯಾಯಾಧಿಕರಣ-2ರ ತೀರ್ಪನ್ನು ಗೆಜೆಟ್‌ನಲ್ಲಿ ಪ್ರಕಟಿಸಲು ಮತ್ತು ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಿ.
  • ಮಹದಾಯಿ (ಕಳಸಾ ನಾಲಾ): ಕುಡಿಯುವ ನೀರಿನ ಯೋಜನೆಗೆ ವನ್ಯಜೀವಿ ವಿಭಾಗದಿಂದ ಶೀಘ್ರವಾಗಿ ಅನುಮತಿ ಕೊಡಲು ವಿನಂತಿ.
  • ನದಿಗಳ ಜೋಡಣೆ: ಗೋದಾವರಿ-ಕಾವೇರಿ ಮತ್ತು ಬೇಡ್ತಿ-ವರದಾ ಯೋಜನೆಗಳಲ್ಲಿ ಕರ್ನಾಟಕಕ್ಕೆ 40-45 ಟಿಎಂಸಿ ನೀರು ಹಂಚಿಕೆಗೆ ಒತ್ತಾಯ.
  • ಮೀಸಲಾತಿ ರಕ್ಷಣೆ: ರಾಜ್ಯದ 56% ಮೀಸಲಾತಿ ನೀತಿಯನ್ನು ಸಂವಿಧಾನದ 9 ನೇಯವರಿಗೆ ಸೇರಿಸಲು ಮನವಿ.
  • ST ಪಟ್ಟಿಗೆ ಸೇರ್ಪಡೆ: ರಾಜ್ಯ ಶಿಫಾರಸು ಮಾಡಿರುವ ಕೆಲವು ಹಿಂದುಳಿದ ಜಾತಿಗಳನ್ನು ಕೇಂದ್ರದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೋರಿಕೆ.
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಆರ್ಟಿಕಲ್ 371(ಜೆ) ಅಡಿಯಲ್ಲಿ ವಾರ್ಷಿಕ ₹5,000 ಕೋಟಿ ಅನುದಾನ ಮತ್ತು ಪ್ರತಿ ಜಿಲ್ಲೆಯಲ್ಲೂ ಸಾರ್ವಜನಿಕ ವಲಯದ ಉದ್ಯಮ (ಪಿಎಸ್‌ಯು) ಸ್ಥಾಪನೆಗೆ ಮನವಿ.
  • ಶರಾವತಿ ಪಂಪ್ಡ್ ಸ್ಟೋರೇಜ್: 2,000 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆ ಶೀಘ್ರ ಅನುಮತಿ ಕೋರಿಕೆ.
  • ರಾಯಚೂರಿನಲ್ಲಿ ಏಮ್ಸ್ (AIIMS): ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸುಧಾರಣೆಗಾಗಿ ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪಿಸಲು ಮಂಜೂರಾತಿಗೆ ಮನವಿ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *