ನೆಲಮಂಗಲ, ಏ.15: ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಶಾಕ್ ನೀಡಿದೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಎಂಬುವವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ ರಾತ್ರಿ ಅದ್ಧೂರಿಯಾಗಿ ರಿಸೆಪ್ಷನ್ ಕೂಡ ಮುಗಿದಿತ್ತು. ಆದರೆ ಇಂದು ತಾಳಿ ಕಟ್ಟುವ ಕೆಲವೇ ಸಮಯದ ಮೊದಲು ಅಧಿಕಾರಿಗಳು ದಾಳಿ. 18 ವರ್ಷ ತುಂಬಿದೆ ಎಂದು ಭಾವಿಸಿ ಮದುವೆ ನಿಶ್ಚಯಿಸಿದ್ದರು. ಆದರೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅನಿತಾ ಲಕ್ಷ್ಮಿ ನೇತೃತ್ವದ ತಂಡ ದಾಖಲೆಗಳನ್ನು ಪರಿಶೀಲಿಸಿದಾಗ, ಬಾಲಕಿಗೆ 18 ವರ್ಷ ತುಂಬಲು ಇನ್ನೂ 4 ತಿಂಗಳು ಬಾಕಿ ಇರುವುದು ದೃಢಪಟ್ಟಿದೆ. ಮದುವೆಗೆ 5 ಲಕ್ಷ ರೂಪಾಯಿ ಖರ್ಚಾಗಿದೆ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದರೂ, ಕಾನೂನಿಗೆ ತಲೆಬಾಗಿ ಮದುವೆ ನಿಲ್ಲಿಸಿದ್ದಾರೆ. “4 ತಿಂಗಳ ನಂತರ ಅದೇ ಹುಡುಗಿಯನ್ನು ಮದುವೆಯಾಗುತ್ತೇನೆ” ಎಂದು ವರ ಕೇಶವ್ ಗೌಡ ಅಧಿಕಾರಿಗಳು ಮುಂದೆ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬಾಲ್ಯ ವಿವಾಹ ಕಾನೂನುಬಾಹಿರ ಎಂದು ಪೋಷಕರಿಗೆ ತಿಳಿಹೇಳಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ