Headlines

ರಸಗೊಬ್ಬರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳ್ತಿದ್ದಾರೆ: ಪ್ರಲ್ಹಾದ್‌ ಜೋಶಿ ಕಿಡಿ

ರಸಗೊಬ್ಬರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳ್ತಿದ್ದಾರೆ: ಪ್ರಲ್ಹಾದ್‌ ಜೋಶಿ ಕಿಡಿ



ರಸಗೊಬ್ಬರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳ್ತಿದ್ದಾರೆ: ಪ್ರಲ್ಹಾದ್‌ ಜೋಶಿ ಕಿಡಿ
<p>ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ಕಿಡಿ ಕಾರಿದ್ದಾರೆ.</p><img><p><strong>ನವದೆಹಲಿ (ಜು.26): </strong>ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿ ಕಾರಿದ್ದಾರೆ.</p><img><p>ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ‌ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ‌ ಬೇಡಿಕೆ ಇಟ್ಟಿತ್ತು.</p><img><p>ಆದರೆ, ಕೇಂದ್ರ ರಸಗೊಬ್ಬರ ಇಲಾಖೆ ರಾಜ್ಯದ ರೈತರ‌ ಹಿತದೃಷ್ಟಿಯಿಂದ ಸಕಾಲಿಕವಾಗಿ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ ಮಾಡಿದೆ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದ್ದಾರೆ.</p><img><p>ರಾಜ್ಯದಲ್ಲಿ ಪ್ರಸ್ತುತ 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟ ದಾಖಲಾಗಿದೆ. ಕೇಂದ್ರ ಸರ್ಕಾರ ಸಕಾಲಕ್ಕೆ ಸಮರ್ಪಕವಾಗಿ ರಸಗೊಬ್ಬರ ಪೂರೈಸಿದ್ದರಿಂದಲೇ ಇಷ್ಟೊಂದು ಪ್ರಮಾಣದಲ್ಲಿ ರಸಗೊಬ್ಬರ ವಹಿವಾಟು ನಡೆದಿದೆ ಎಂದರು.</p><img><p>ವಾಸ್ತವ ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಅವರು‌ ವಿನಾಕಾರಣ ಕೇಂದ್ರ‌ದ ಮೇಲೆ ಆರೋಪ ಮಾಡುತ್ತಿರುವುದು ನಿಜಕ್ಕೂ ಶೋಚನೀಯ ಎಂದು ಟೀಕಿಸಿದರು. ರಾಜ್ಯದಲ್ಲಿ ಯೂರಿಯಾ ಅಭಾವವಿಲ್ಲ. ಹೆಚ್ಚಿನ ಸಂಗ್ರಹಣೆಯಿದೆ ಎಂದು ಖುದ್ದು ಕೃಷಿ ಸಚಿವ ಚಲುವರಾಯಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ.</p><img><p>ಆದರೆ, ಸಿಎಂ ಮಾತ್ರ ಅವಾಸ್ತವಿಕ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಕುರ್ಚಿ ಗಲಾಟೆ, ಹದಗೆಟ್ಟ ರಾಜ್ಯದ ‌ಆರ್ಥಿಕ‌ ಸ್ಥಿತಿ‌ ಮತ್ತು ತಮ್ಮ ಸರ್ಕಾರದ ದುರಾಡಳಿತವನ್ನೆಲ್ಲ ಮರೆಮಾಚಲು ಹೀಗೆ ಕೇಂದ್ರ ಸರ್ಕಾರದ ವಿರುದ್ದ ಸುಳ್ಳು ಆರೋಪ ಮಾಡುತ್ತಿರುವುದು ಅಕ್ಷಮ್ಯ ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.</p>



Source link

Leave a Reply

Your email address will not be published. Required fields are marked *