
ಧರ್ಮಸ್ಥಳದಲ್ಲಿ ಹೂತಿದ್ದ ನೂರಾರು ಶವ ಪ್ರಕರಣದಲ್ಲಿ ಇದೀಗ 3ನೇ ಪಾಯಿಂಟ್ನಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.
ಧರ್ಮಸ್ಥಳ (ಜು.30) ಧರ್ಮಸ್ಥಳ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ದೂರುದಾರ ಸೂಚಿಸಿದ ಸ್ಥಳಗಳಲ್ಲಿ ಎಸ್ಐಟಿ ಅಧಿಕಾರಿಗಳು ಉತ್ಖನನ ಕಾರ್ಯ ನಡೆಸುತ್ತಿದೆ. ಇದೀಗ ದೂರುದಾರ ಗುರುತಿಸಿದ ಮೂರನೇ ಸ್ಥಳದಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಸದ್ಯ ಮೂರನೇ ಪಾಯಿಂಟ್ ಉತ್ಖನನ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದ್ದು, ನಾಲ್ಕನೇ ಸ್ಥಳ ಅಗೆಯುವ ಕಾರ್ಯಕ್ಕೆ ಎಸ್ಐಟಿ ಮುಂದಾಗಿದೆ.