
ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಮೂರನೇ ದಿನದ ಉತ್ಖನನದ ವೇಳೆ 6 ನೇ ಪಾಯಿಂಟ್ನಲ್ಲಿ ಮೂಳೆಗಳು ಪತ್ತೆಯಾಗಿವೆ. ಎಸ್ಐಟಿ ತಂಡವು ಪತ್ತೆಯಾದ ಮೂಳೆಗಳನ್ನು ಸಂಗ್ರಹಿಸಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಮಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂರನೇ ದಿನ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ಉತ್ಪನನದ ವೇಳೆ 6 ನೇ ಪಾಯಿಂಟ್ ನಲ್ಲಿ ಅವಶೇಷ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಶೋಧದ ವೇಳೆ ಪತ್ತೆಯಾದ ಮೂಳೆಗಳನ್ನು ಎಸ್ಐಟಿ ಸಂಗ್ರಹ ಮಾಡಿದೆ ಎಂದು ವರದಿ ತಿಳಿಸಿದೆ. 6 ನೇ ಪಾಯಿಂಟ್ನಲ್ಲಿ ಎರಡು ಮೂಳೆಗಳು ಪತ್ತೆಯಾಗಿದೆಯಂತೆ ಎಸ್ಐಟಿ ಈ ಬಗ್ಗೆ ಸ್ಪಷ್ಟಪಡಿಸಬೇಕಿದೆ ಎಂದು ವರದಿ ತಿಳಿಸಿದೆ.