ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಬಾಲಿವುಡ್‌ಗೆ ಎಂಟ್ರಿ: ಟೈಗರ್ ಶ್ರಾಫ್ ಜೊತೆ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ

ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಬಾಲಿವುಡ್‌ಗೆ ಎಂಟ್ರಿ: ಟೈಗರ್ ಶ್ರಾಫ್ ಜೊತೆ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ



ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಬಾಲಿವುಡ್‌ಗೆ ಎಂಟ್ರಿ: ಟೈಗರ್ ಶ್ರಾಫ್ ಜೊತೆ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ
<p>ಸಚಿನ್‌ ಅವರು ಇದೀಗ ಹೊಸ ಬಾಲಿವುಡ್‌ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್‌. ಇದೊಂದು ಭಾವನಾತ್ಮಕ ಕತೆಯುಳ್ಳ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ಎನ್ನಲಾಗಿದೆ.</p><img><p>‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ದೇಶಿಸಿದ್ದ ಸಚಿನ್‌ ಅವರು ಇದೀಗ ಹೊಸ ಬಾಲಿವುಡ್‌ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್‌.</p><img><p>ಬಾಲಿವುಡ್‌ನ ಖ್ಯಾತ ನಾಯಕ ನಟ ಟೈಗರ್‌ ಶ್ರಾಫ್‌ ಅವರು ಈ ಸಿನಿಮಾದ ಕತೆ ಕೇಳಿ ಥ್ರಿಲ್‌ ಆಗಿ ಬೇರೊಂದು ಸಿನಿಮಾವನ್ನು ಹೋಲ್ಡ್‌ ಮಾಡಿ ಈ ಸಿನಿಮಾ ಆರಂಭಿಸಲು ಸೂಚನೆ ನೀಡಿದ್ದಾರೆ.</p><img><p>ಹಾಗಾಗಿ ಸಚಿನ್‌ ನಿರ್ದೇಶನದ ಸಿನಿಮಾ ತಕ್ಷಣವೇ ಶುರುವಾಗಲಿದ್ದು, ಅಕ್ಟೋಬರ್‌ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ‘ಅನಿಮಲ್‌’, ‘ಕಬೀರ್‌ ಸಿಂಗ್‌’ ಸಿನಿಮಾ ನಿರ್ಮಿಸಿದ್ದ ಮುರದ್‌ ಖೇತನಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ.</p><img><p>ಇದೊಂದು ಭಾವನಾತ್ಮಕ ಕತೆಯುಳ್ಳ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ಎನ್ನಲಾಗಿದೆ. ಪ್ರೀ-ಪ್ರೊಡಕ್ಷನ್‌ ಕೆಲಸ ಆರಂಭವಾಗಿದೆ. ತಾರಾಗಣ, ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. ಇದೊಂದು ಹೈಬಜೆಟ್‌ ಸಿನಿಮಾ ಆಗಿದ್ದು, ಬಹುತೇಕ ಮುಂಬೈನಲ್ಲಿಯೇ ಚಿತ್ರೀಕರಣ ನಡೆಯಲಿದೆ.</p><img><p>ಸಚಿನ್‌ ಅವರು ಶಾಹೀದ್‌ ಕಪೂರ್‌ ನಟನೆಯ ‘ಅಶ್ವತ್ಥಾಮ’ ಸಿನಿಮಾ ನಿರ್ದೇಶಿಸಬೇಕಿತ್ತು. ಆ ಸಿನಿಮಾ ಮುಂದಕ್ಕೆ ಹೋಗಿರುವುದರಿಂದ ಸಚಿನ್‌ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.</p>



Source link

Leave a Reply

Your email address will not be published. Required fields are marked *