Headlines

ಗಂಡನ ಸಾವಿನ ತನಗಿಂತ ಚಿಕ್ಕ ವಯಸ್ಸಿನ ಯುವಕನೊಂದಿಗೆ ಓಡಿ ಹೋದ ಆಂಟಿ; ಮಕ್ಕಳಿಗೆ ಬೆದರಿಕೆ | Up News Mother Of 17 Year Old Son Who Ran Away With Man After Husband Death Mrq

ಗಂಡನ ಸಾವಿನ ತನಗಿಂತ ಚಿಕ್ಕ ವಯಸ್ಸಿನ ಯುವಕನೊಂದಿಗೆ ಓಡಿ ಹೋದ ಆಂಟಿ; ಮಕ್ಕಳಿಗೆ ಬೆದರಿಕೆ | Up News Mother Of 17 Year Old Son Who Ran Away With Man After Husband Death Mrq



ಗಂಡನ ಸಾವಿನ ತನಗಿಂತ ಚಿಕ್ಕ ವಯಸ್ಸಿನ ಯುವಕನೊಂದಿಗೆ ಓಡಿ ಹೋದ ಆಂಟಿ; ಮಕ್ಕಳಿಗೆ ಬೆದರಿಕೆ | Up News Mother Of 17 Year Old Son Who Ran Away With Man After Husband Death Mrq

Woman Elope: ಪತಿಯ ಮರಣದ ನಂತರ ಮಹಿಳೆಯೊಬ್ಬರು ತನಗಿಂತ ಕಿರಿಯ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾರೆ. ಮನೆಯಿಂದ ಹೋಗುವಾಗ 3.5 ಲಕ್ಷ ರೂಪಾಯಿ ಮೌಲ್ಯದ ನಗದು ಮತ್ತು ಆಭರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ. 

ಲಕ್ನೋ: ಗಂಡನ ಸಾವಿನ ಬಳಿಕ ಮತ್ತೊಂದು ಮದುವೆಯಾಗೋದು ಮಹಿಳೆಯ ವಿವೇಚನೆಗೆ ಬಿಟ್ಟಿದ್ದು. ಸಾಮಾನ್ಯವಾಗಿ ಪುರುಷರು ಪತ್ನಿ ನಿಧನದ ಬಳಿಕ ಎರಡನೇ ಮದುವೆಯಾಗುತ್ತಾರೆ. ಮಹಿಳೆಯರು ಸಹ ಒಂಟಿಯಾಗಿ ಜೀವನ ನಡೆಸಲು ಸಾಧ್ಯವಾಗದಿದ್ದರೆ ಎರಡನೇ ಮದುವೆಯಾಗುತ್ತಾರೆ. ಇದೀಗ ಇಂತಹವುದೇ ಒಂದು ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಪತಿಯ ನಿಧನದ ಬಳಿಕ ಮಹಿಳೆ ತನಗಿಂತ ಚಿಕ್ಕ ವಯಸ್ಸಿನ ಪುರುಷನನ್ನು ಮದುವೆಯಾಗಿದ್ದಾರೆ. ಮನೆಯಿಂದ ಹೋಗುವಾಗ 3.5 ಲಕ್ಷ ರೂಪಾಯಿ ಮೌಲ್ಯದ ನಗದು ಮತ್ತು ಅಮೂಲ್ಯ ಆಭರಣಗಳೊಂದಿಗೆ ಓಡಿ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮ್ಮ ಹೋದ ಬಳಿಕ ಒಂಟಿಯಾದ 17 ವರ್ಷದ ಮಗ ಪೊಲೀಸ್ ಠಾಣೆ ಮೆಟ್ಟಿಲೇರಿ ರಕ್ಷಣೆ ಕೇಳಿದ್ದಾನೆ.

ಗೆಳತಿಯರೊಂದಿಗೆ ಪಂಜಾಬ್‌ಗೆ ಹೋಗಿದ್ದ ಅಮ್ಮ ಬರಲೇ ಇಲ್ಲ

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆ ಮುಜಾಫರ್‌ನಗರದಲ್ಲಿ ಈ ಘಟನೆ ನಡೆದಿದೆ. 17 ವರ್ಷದ ಮಗ ಮನೀಶ್ ವರ್ಮಾ, ತನಗೆ ತಾಯಿ ಮತ್ತು ಆಕೆಯ ಪ್ರಿಯಕರನಿಂದ ಜೀವಕ್ಕೆ ಅಪಾಯವಿದೆ ಎಂದು ಪೊಲೀಶ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾನೆ. ಕೆಲ ತಿಂಗಳ ತಂದೆ ಅನಾರೋಗ್ಯದಿಂದಾಗಿ ಮೃತರಾದರು. ನಂತರ ಮುಜಾಫರ್‌ ನಗರದ ನಿವಾಸಿ ಅನುಜ್ ಭಾಟಿ ಎಂಬ ಯುವಕನೊಂದಿಗೆ ರಿಲೇಶನ್‌ಶಿಪ್‌ನಲ್ಲಿದ್ದರು. ಜುಲೈ 25ರಂದು ಗೆಳತಿಯರಾದ ರಿಹಾನ್ನಾ, ಶಹಜಾದಿ ಮತ್ತು ನೂರ್ ಜಹಾನ್ ಎಂಬವರ ಜೊತೆ ತಾಯಿ ಪಂಜಾಬ್‌ಗೆ ತೆರಳಿದ್ದರು. ಅಲ್ಲಿಂದ ಅನುಜ್ ಭಾಟಿ ಜೊತೆ ಅಮ್ಮ ಓಡಿ ಹೋಗಿದ್ದಾರೆ ಎಂದು ಮನೀಶ್ ವರ್ಮಾ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಅಮ್ಮನ ಮೂವರು ಗೆಳತಿಯರಿಂದ ಬೆದರಿಕೆ ಸಂದೇಶದ ಆರೋಪ

ಅಮ್ಮ ದೂರವಾದ ಬಳಿಕ ಮನೀಶ್ ಮತ್ತು ಆತನ ಸೋದರ ಒಂಟಿಯಾಗಿದ್ದಾನೆ. ನಂತರ ತಮಗೆ ನಿರಂತರವಾಗಿ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಮನೀಶ್ ವರ್ಮಾ ಆರೋಪಿಸಿದ್ದಾನೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸದಂತೆ ಬೆದರಿಕೆ ಹಾಕಲಾಗಿತ್ತು. ತಮ್ಮ ಮೇಲೆ ಹಲ್ಲೆ ಸಹ ನಡೆಸಲಾಗಿದೆ ಎಂದು ಮನೀಶ್ ಆರೋಪಿಸಿದ್ದಾರೆ. ಅಮ್ಮನ ಮೂವರು ಗೆಳತಿಯರಾದ ರಿಹಾನ್ನಾ, ಶಹಜಾದಿ ಮತ್ತು ನೂರ್ ಜಹಾನ್ ರೈತ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದಾರೆ.

ರಿಹಾನ್ನಾ, ಶಹಜಾದಿ ಮತ್ತು ನೂರ್ ಜಹಾನ್ ಬೆದರಿಕೆ

ಪೊಲೀಸರಿಗೆ ದೂರು ನೀಡಿದ್ರೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸೋದಾಗಿ ರಿಹಾನ್ನಾ, ಶಹಜಾದಿ ಮತ್ತು ನೂರ್ ಜಹಾನ್ ಬೆದರಿಕೆ ಹಾಕಿದ್ದಾರೆ. ನಾನು ಮತ್ತು ಅಣ್ಣ ಬೆದರಿಕೆಯ ನೆರಳಿನಲ್ಲಿ ಬದುಕುತ್ತಿರೋದಾಗಿ ಹೇಳಿದ್ದಾರೆ. ಹೀಗಾಗಿ ರಕ್ಷಣೆ ಕೋರಿ ಮನೀಶ್ ವರ್ಮಾ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಇದನ್ನೂ ಓದಿ: ಕಾಮದಾಸೆ ಬಿಸಿಯಾದ ಅಪ್ಪುಗೆ ಬಯಸಿದಾಗಲೇ ನಿಲ್ಲಿಸಿದ್ಳು ಗಂಡನ ಉಸಿರು; ಏನಿದು ಫರ್ಜಾನಾಳ ವಿರಹದ ಕಥೆ?

ತಂದೆ ಆಸ್ತಿ ಪಡೆದುಕೊಳ್ಳಲು ಅನುಜ್ ಭಾಟಿ ಪ್ರಯತ್ನ

ದೂರು ದಾಖಲಿಸಿದ್ರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮನೀಶ್ ವರ್ಮಾ ಆರೋಪಿಸಿದ್ದಾನೆ. ತಾಯಿ ಮನೆಯ ಎಲ್ಲಾ ಆಸ್ತಿಯನ್ನು ಮಾರಾಟ ಮಾಡಿದ್ದಾಳೆ. ತಾಯಿಯ ಪ್ರಿಯಕರ ಅನುಜ್ ಭಾಟಿ, ನಮ್ಮ ತಂದೆಯ ಜಮೀನು ಮತ್ತು ಇತರೆ ಆಸ್ತಿಯನ್ನು ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾನೆ. ಪೊಲೀಸರಿಗೆ ಎಲ್ಲಾ ಘಟನೆಯನ್ನು ವಿವರಿಸಿ ದೂರು ಸಹ ನೀಡಲಾಗಿದೆ. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ತಾಯಿ ಮತ್ತು ಅವರ ಸಹಚರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನೀಶ್ ವರ್ಮಾ ಆಗ್ರಹಿಸಿದ್ದಾರೆ.

ಮನೀಶ್ ವರ್ಮಾ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಮಕ್ಕಳೊಂದಿಗೆ ತಾಯಿ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಹೇಳಲಾಗಿದೆ.



Source link

Leave a Reply

Your email address will not be published. Required fields are marked *