
ರಾಜರಾಜೇಶ್ವರಿ ನಗರದ ಸ್ಪರ್ಶ್ ಆಸ್ಪತ್ರೆಯ 30 ವರ್ಷದ ರೋಗಿಯೊಬ್ಬರು ತೀವ್ರ ಪ್ರಮಾಣದ ಹೆಪಟೈಟಿಸ್ನಿಂದಾಗಿ ಯಕೃತ್ ವೈಫಲ್ಯದಿಂದ ಯಕೃತ್ ಕಸಿಗಾಗಿ ಕಳೆದ ಎರಡು ತಿಂಗಳಿನಿಂದ ನಿರೀಕ್ಷೆಯಲ್ಲಿದ್ದರು. ದಾನಿಯ ಯಕೃತ್ ಮತ್ತು ರೋಗಿಯ ಯಕೃತ್ ಹೊಂದಾಣಿಕೆ ಆಗುತ್ತಿತ್ತು.
ತಕ್ಷಣ ಕಾರ್ಯಪ್ರವೃತ್ತವಾದ ಸ್ಪರ್ಶ್ ವೈದ್ಯರ ತಂಡ ಯಕೃತ್ ಅಂಗಾಗ ಕಸಿ ಹಿರಿಯ ಸಮಾಲೋಚಕ ಡಾ.ಮಹೇಶ್ ಗೋಪಸೆಟ್ಟಿ ನೇತೃತ್ವದಲ್ಲಿ ಶುಕ್ರವಾರ ರಾತ್ರಿ ಯಕೃತ್ ಕಸಿ ನೆರವೇರಿಸಿದ್ದು ಇದೀಗ ರೋಗಿಯು ಐಸಿಯುನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಮೆಟ್ರೋ, ಕರ್ನಾಟಕ ಅಂಗಾಂಗ ಕಸಿ ಪ್ರಾಧಿಕಾರ ಸೊಟ್ಟೋ ಹಾಗೂ ಸ್ಪರ್ಶ್ ಆಸ್ಪತ್ರೆಯ ನುರಿತ ವೈದ್ಯರು ಹಾಗೂ ತಂಡದ ಸಮನ್ವಯದಿಂದ ಇದು ಸಾಧ್ಯವಾಗಿದೆ.