ಕೇಂದ್ರದಿಂದ ರಾಜ್ಯಕ್ಕೆ ಕೊಟ್ಟ ಯೂರಿಯಾ ಗೊಬ್ಬರ ಕೇರಳಕ್ಕೆ ಕಳಿಸಿದ ಸರ್ಕಾರಿ ಗೋದಾಮು; ರಾಜ್ಯ ರೈತರಿಗೆ ಪಂಗನಾಮ!

ಕೇಂದ್ರದಿಂದ ರಾಜ್ಯಕ್ಕೆ ಕೊಟ್ಟ ಯೂರಿಯಾ ಗೊಬ್ಬರ ಕೇರಳಕ್ಕೆ ಕಳಿಸಿದ ಸರ್ಕಾರಿ ಗೋದಾಮು; ರಾಜ್ಯ ರೈತರಿಗೆ ಪಂಗನಾಮ!



ಕೇಂದ್ರದಿಂದ ರಾಜ್ಯಕ್ಕೆ ಕೊಟ್ಟ ಯೂರಿಯಾ ಗೊಬ್ಬರ ಕೇರಳಕ್ಕೆ ಕಳಿಸಿದ ಸರ್ಕಾರಿ ಗೋದಾಮು; ರಾಜ್ಯ ರೈತರಿಗೆ ಪಂಗನಾಮ!
ನಂಜನಗೂಡಿನ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆ ಪ್ರಕರಣ ಬೆಳಕಿಗೆ. ಚೆಕ್ ಪೋಸ್ಟ್‌ನಲ್ಲಿ 15 ಟನ್ ಗೊಬ್ಬರ ವಶ. ಅಂತರರಾಜ್ಯ ಸಾಗಾಟ ನಿಷೇಧದ ನಡುವೆಯೂ ಅಕ್ರಮ ಸಾಗಾಟ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸ.<img><p>ರಾಜ್ಯದಲ್ಲಿ ಗೊಬ್ಬರಕ್ಕಾಗಿ ರೈತರು ಸಾಲು ಸಾಲು ನಿಂತು ಪರದಾಡುತ್ತಿರುವ ಸಂದರ್ಭದಲ್ಲಿ, ನಂಜನಗೂಡಿನ ಗೋದಾಮಿನಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೃಷಿ ಇಲಾಖೆ ಮತ್ತು ಪೊಲೀಸರ ಜಂಟಿ ದಾಳಿಯಲ್ಲಿ ಸುಮಾರು 15 ಟನ್ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.</p><img><p>ಈ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಸುಮಾರು 330 ಚೀಲ ಯೂರಿಯಾ ಹೊತ್ತೊಯ್ಯುತ್ತಿದ್ದ ಲಾರಿಯೊಂದನ್ನು ವಶಪಡಿಸಿ, ಲಾರಿ ಚಾಲಕನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.</p><img><p><strong>ಅಂತರಾಜ್ಯ ಸಾಗಾಟಕ್ಕೆ ಅನುಮತಿ ಇಲ್ಲ!</strong></p><p>ರಾಜ್ಯದಲ್ಲಿ ಗೊಬ್ಬರದ ಕೊರತೆ ಇದ್ದು, ಸರ್ಕಾರದ ನಿಯಮಾನುಸಾರ ಅಂತರರಾಜ್ಯ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿ ಕೇರಳಕ್ಕೆ ಸಾಗಿಸುತ್ತಿದ್ದ ಪ್ರಕರಣವು ಗಂಭೀರ ಚರ್ಚೆಗೆ ಕಾರಣವಾಗಿದೆ.</p><img><p><strong>ನಂಜನಗೂಡಿನ ಗೋದಾಮು ಮೂಲ!</strong></p><p>ತದನಂತರದ ತನಿಖೆಯಲ್ಲಿ, ಈ ಗೊಬ್ಬರವನ್ನು ನಂಜನಗೂಡಿನ ಸರ್ಕಾರಿ ಗೋದಾಮಿನಿಂದ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ. ಘಟನೆಯ ಸಂಬಂಧಪಟ್ಟಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಮುಂದಿನ ತನಿಖೆ ಆರಂಭಿಸಲಾಗಿದೆ.</p><img><p><strong>ಕಾನೂನು ಕ್ರಮಕ್ಕೆ ಕೋರಿಕೆ</strong></p><p>ಈ ಮಧ್ಯೆ ರೈತ ಸಂಘಗಳ ಪ್ರತಿಕ್ರಿಯೆಯೂ ಹೊರಬಿದ್ದಿದ್ದು, ‘ರಾಜ್ಯಕ್ಕೆ ಗೊಬ್ಬರ ಸಾಕಾಗದ ವೇಳೆ ಇಂತಹ ಅಕ್ರಮ ಸಾಗಾಟಗಳು ರೈತರ ಹಕ್ಕಿಗೆ ಧಕ್ಕೆ ಉಂಟುಮಾಡುತ್ತವೆ. ಗೋದಾಮಿನಲ್ಲಿ ಯಾವುದೇ ಅಧಿಕಾರಿಗಳ ಕೈವಾಡವಿದೆಯೇ ಎಂಬುದರ ಮೇಲೆ ಹೆಚ್ಚಿನ ತನಿಖೆ ನಡೆಯಬೇಕು’ ಎಂಬ ಒತ್ತಾಯ ಕೇಳಿಬಂದಿದೆ.</p>



Source link

Leave a Reply

Your email address will not be published. Required fields are marked *