
ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆಯಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.<img><p><strong>ಮಂಡ್ಯ (ಆ.07): </strong>ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು, ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ಕಳ್ಳತನ ಮಾಡಿ ಅನ್ಯಧರ್ಮದ ಚಿಹ್ನೆಯನ್ನು ಗೋಡೆಯ ಮೇಲೆ ಬರೆದು ಹೋಗಿದ್ದಾರೆ. ಈ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.</p><img><p>ಕಳೆದ ರಾತ್ರಿ, ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿರುವ ಏಳೂರಮ್ಮ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ದೇವಸ್ಥಾನದಲ್ಲಿದ್ದ ಚಿಕ್ಕ ಪುಟ್ಟ ನಗದು ಹಣ ಮತ್ತು ತಟ್ಟೆಯಲ್ಲಿ ಇಟ್ಟಿದ್ದ ಚಿಲ್ಲರೆ ಕಾಸನ್ನು ತೆಗೆದುಕೊಂಡು ಹೋಗಿದ್ದಾರೆ.</p><img><p>ಆದರೆ, ಕಳ್ಳತನದ ನಂತರ ದೇವಸ್ಥಾನದ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಮತ್ತು ‘786’ ಎಂಬ ಸಂಖ್ಯೆಯನ್ನು ಬರೆದಿರುವುದು ಈ ಘಟನೆಯನ್ನು ಹೆಚ್ಚು ಸಂಶಯಾಸ್ಪದವಾಗಿಸಿದೆ.</p><img><p><strong>ಮತ್ತೊಂದು ದೇವಸ್ಥಾನಕ್ಕೂ ಕಳ್ಳರ ಎಂಟ್ರಿ</strong></p><p>ದುಷ್ಕರ್ಮಿಗಳು ಏಳೂರಮ್ಮ ದೇವಸ್ಥಾನಕ್ಕೂ ಮುನ್ನ ಅದೇ ಗ್ರಾಮದ ದಂಡಿಮಾರಮ್ಮ ದೇವಸ್ಥಾನಕ್ಕೂ ನುಗ್ಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ದಂಡಿಮಾರಮ್ಮ ದೇವಸ್ಥಾನದಲ್ಲಿ ಯಾವುದೇ ಕಳ್ಳತನವಾಗಿಲ್ಲ ಮತ್ತು ಯಾವುದೇ ಬರಹವನ್ನು ಬರೆದಿಲ್ಲ. ಈ ಘಟನೆಗಳಿಂದಾಗಿ ದ್ವೇಷದ ಉದ್ದೇಶದಿಂದ ಈ ಕೃತ್ಯ ನಡೆದಿದೆಯೇ ಎಂಬ ಅನುಮಾನ ಮೂಡಿದೆ.</p><img><p>ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವಸ್ಥಾನದ ಗೋಡೆ ಮೇಲೆ ಬರೆದಿರುವ ಚಿಹ್ನೆ ಮತ್ತು ಸಂಖ್ಯೆಗಳ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ. ಸದ್ಯ ಗ್ರಾಮದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಈ ಕೃತ್ಯದ ಹಿಂದಿರುವ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಈ ವಿಲಕ್ಷಣ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮತ್ತು ಕೋಪ ಎರಡೂ ಮನೆಮಾಡಿದೆ.</p>
Source link
ಮಂಡ್ಯ ಏಳೂರಮ್ಮ ದೇವಸ್ಥಾನದಲ್ಲಿ ಕಳ್ಳತನ ಮಾಡಿ, ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ವಿಕೃತಿ!